ಚಿಕಿತ್ಸೆಗಾಗಿ ಪ್ಯಾರಿಸ್ಗೆ ಹ್ಯಾಟ್ರಿಕ್ ಹೀರೋ ಶಿವಣ್ಣ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಜೂ.15ರಂದು ಪ್ಯಾರಿಸ್ಗೆ ಪ್ರಯಾಣ ಬೆಳೆಸಲಿದ್ದಾರೆ. ಅವರಿಗೆ ಹಿಂದೊಮ್ಮೆ ತಲೆಗೆ ಪೆಟ್ಟುಬಿದ್ದ ಕಾರಣ ಆಗಾಗ ಕುತ್ತಿಗೆ ಹಾಗೂ ಬೆನ್ನು ನೋವು ಕಾಣಿಸಿಕೊಳ್ಳುತ್ತಿತ್ತು. ಚಿಕಿತ್ಸೆ ಬಳಿಕ ಜೂ.22ರಂದು ಶಿವಣ್ಣ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎನ್ನುತ್ತವೆ ಮೂಲಗಳು.
ಮುಂಬೈನ ಧೀರುಬಾಯ್ ಅಂಬಾನಿ ಆಸ್ಪತ್ರೆಯ ಸ್ಕ್ಯಾನಿಂಗ್ ರಿಪೋರ್ಟ್ಗಳನ್ನು ಹೆಚ್ಚಿನ ವಿವರಗಳಿಗಾಗಿ ಪ್ಯಾರಿಗೆ ಕಳುಹಿಸಲಾಗಿತ್ತು. ಪರೀಕ್ಷಿಸಿದ ಅಲ್ಲಿನ ವೈದ್ಯರು ಬಂದು ಚಿಕಿತ್ಸೆ ಪಡೆಯುವಂತೆ ಶಿವಣ್ಣನಿಗೆ ಸೂಚಿಸಿದ್ದಾರೆ. ಅಭಿಮಾನಿಗಳು ಗಾಬರಿಪಡುವಂತಹದ್ದು ಏನೂ ಆಗಿಲ್ಲ. ಒಂದು ಸಣ್ಣ ಚಿಕಿತ್ಸೆ ಅಷ್ಟೆ ಎನ್ನಲಾಗಿದೆ.
ಸದ್ಯಕ್ಕೆ ಭರಣಿ ಮಿನರಲ್ಸ್ ಅವರ 'ಲಕ್ಷ್ಮಿ' ಚಿತ್ರದಲ್ಲಿ ಶಿವಣ್ಣ ಅಭಿನಯಿಸುತ್ತಿದ್ದಾರೆ. ಪ್ಯಾರಿಸ್ನಿಂದ ಹೊರಬಂದ ಬಳಿಕ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಶಿವಣ್ಣ ಅವರಿಗೆ ತಿಳಿಸಿದ್ದಾರೆ. ಇದಕ್ಕಾಗಿ ಒಂದು ವಾರ ಸಮಯ ಕೊಡುವಂತೆ ಅವರು ನಿರ್ಮಾಪಕರಲ್ಲಿ ವಿನಂತಿಸಿಕೊಂಡಿದ್ದಾರೆ. ಶಿವಣ್ಣ ಅವರಿಗೆ ಶುಭವಾಗಲಿ. (ದಟ್ಸ್ಕನ್ನಡ ಸಿನಿವಾರ್ತೆ)


Click it and Unblock the Notifications











