Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬಿಕರೊಂದಿಗೆ ಆಶ್ಲೇಷ ಬಲಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ, ಮಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಶುಕ್ರವಾರವೇ(ಮೇ.28) ಆಗಮಿಸಿದ ಶಿವಣ್ಣ ಶನಿವಾರ ಈ ವಿಶೇಷ ಪೂಜೆಯನ್ನು ನೆರವೇರಿಸಿದರು.
ಶನಿವಾರ ಮುಂಜಾನೆ ಮಹಾಪೂಜೆ ಮತ್ತು ವಿಶೇಷ ಸೇವೆ ಸಲ್ಲಿಸಿ ಶಿವಣ್ಣ ಕೃತಾರ್ಥರಾದರು. ಬಳಿಕ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಕುಕ್ಕೆಗೆ ಇದೇ ಮೊದಲ ಬಾರಿಗೆ ಬಂದಿದ್ದ ಶಿವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್, 2011 ತಮ್ಮ ಬದುಕಿನಲ್ಲಿ ತುಂಬ ಮಹತ್ವಪೂರ್ಣವಾದ ವರ್ಷ. 2011ರ ಹೊತ್ತಿಗೆ ತಾವು ಚಿತ್ರರಂಗಕ್ಕೆ ಅಡಿಯಿಟ್ಟು 25 ವರ್ಷಗಳು ಪೂರ್ಣವಾಗಲಿವೆ. ಹಾಗೆಯೇ ತಮ್ಮ ದಾಂಪತ್ಯ ಜೀವನಕ್ಕೂ 25 ವರ್ಷಗಳು ತುಂಬುತ್ತವೆ. ಅಷ್ಟೇ ಅಲ್ಲದೆ ತಾವು 50ನೇ ವರ್ಷಕ್ಕೆ ಅಡಿಯಿಡಲಿದ್ದೇವೆ ಎಂದು ತಿಳಿಸಿದ್ದಾರೆ.
'ಮೈಲಾರಿ' ಚಿತ್ರ ತಮ್ಮ ಅಭಿನಯದಲ್ಲಿ ಮೂಡಿಬರುತ್ತಿರುವ 99ನೆಯ ಚಿತ್ರವಾಗಲಿದೆ. ಜೋಗಯ್ಯ ನೂರನೇ ಚಿತ್ರ. 2011ಕ್ಕೆ ಜೋಗಯ್ಯ ತೆರೆ ಕಾಣಲಿದ್ದಾನೆ ಎಂದು ಶಿವರಾಜ್ ಕುಮಾರ್ ವಿವರ ನೀಡಿದ್ದಾರೆ. ಈ ಸಂದರ್ಭದಲ್ಲಿ ಮೈಲಾರಿ ಚಿತ್ರದ ನಿರ್ದೇಶಕ ಆರ್ ಚಂದ್ರು ಉಪಸ್ಥಿತರಿದ್ದರು.
ಆಶ್ಲೇಷ ಬಲಿ ಪೂಜೆ ವಿಶೇಷತೆ