Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಂಸ್ಕೃತಿಕ ನಗರಿಯಲ್ಲಿ ‘ಸ್ವರಾಂಜಲಿ’
ಶ್ರೀವಿದ್ಯಾ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಸ್ವರಾಂಜಲಿ' ಚಿತ್ರಕ್ಕೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಾಹಿತಿ ರಾಂನಾರಾಯನ್ ರಚಿಸಿರುವ 'ಎಲ್ಲೆಲ್ಲಿಂದಲೊ ಬಂದು ಕೂಡಿಕೊಳ್ಳುವ ನಮ್ಮ ಪಾಲಿಗೆ ಕಾಲೇಜು ಗುಡಿ ಅಲ್ಲವಾ ಕೈಯ ಮುಗಿದು ವಂದನೆ ಹೇಳುವಾ' ಎಂಬ ಗೀತೆಯು ಹುಣುಸೂರು ರಸ್ತೆಯಲ್ಲಿರುವ ಡಿಸಾಲ್ ಇಂಟರ್ ನ್ಯಾಷನಲ್ ಕಾಲೇಜಿನಲ್ಲಿ ಚಿತ್ರೀಕರಣವಾಯಿತು.
ರಮಣ, ರಶ್ಮಿ, ಸ್ಪೂರ್ತಿ ಹಾಗೂ 30ಜನ ನರ್ತಕರು ಈ ಗೀತೆಯ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಹಿಂದೆ 'ತಂಗಿಯ ಮನೆ'ಚಿತ್ರವನ್ನು ನಿರ್ದೇಶಿಸಿದ ಎಂ.ಎಸ್.ಶ್ರೀನಿವಾಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಇವರು ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಬಿ.ಎಲ್.ಬಾಬು ಕ್ಯಾಮೆರಾ, ಚಂದ್ರಕಾಂತ್ ಸಂಗೀತ, ಕೌರವ ವೆಂಕಟೇಶ್ ಸಾಹಸ, ಸಂಜೀವ್ರೆಡ್ಡಿ ಸಂಕಲನ, ಸತೀಶ್ ನೃತ್ಯ ಹಾಗೂ ಚೆನ್ನಯ್ಯ ಅವರ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ರಮಣ, ರಶ್ಮಿ, ಸ್ಪೂರ್ತಿ, ಶರತ್ ಲೋಹಿತಾಶ್ವ, ಪ್ನ್ನಂಬಲು, ಎಂ.ಎಸ್.ಶ್ರೀನಿವಾಸ್, ಸೂರ್ಯಕಿರಣ್, ರಮೇಶ್ಭಟ್, ಶೋಭ್ರಾಜ್, ಸುಂದರರಾಜ್, ಧರ್ಮ, ಶ್ರೀಧರ್, ಸಿದ್ದರಾಜು ಕಲ್ಮಣ್ಕರ್, ಆನಂದರಾಜು ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)