Don't Miss!
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆಲುಗು ದೇಶಂ ಪಕ್ಷಕ್ಕೆ ಸಿನಿಮಾ ತಾರೆ ಜಯಪ್ರದಾ?
ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರರಸಿಕರ ಮನಸೂರೆಗೊಂಡಿದ್ದ ನಾಯಕಿ ಜಯಪ್ರದಾ. ವರನಟ ಡಾ.ರಾಜ್ ಕುಮಾರ್ ಅವರೊಂದಿಗಿನ 'ಕವಿರತ್ನ ಕಾಳಿದಾಸ' ಚಿತ್ರದ ಹಾಡು "ಓ.... ಓ....ಓ ಪ್ರಿಯತಮಾ ಪ್ರಿಯತಮಾ...ಕರುಣೆಯಾ ತೋರೆಯಾ" ನೆನಪಿಸಿಕೊಂಡರೆ ಮೈ ಪುಳಕಗೊಳ್ಳುತ್ತದೆ. ಇಷ್ಟೆಲ್ಲಾ ಹಳೆಯ ಪುರಾಣ ಹೇಳಲು ಕಾರಣ, ಜಯಪ್ರದಾ ಆಂಧ್ರ ರಾಜಕೀಯಕ್ಕೆ ಧುಮಕುತ್ತಿದ್ದಾರೆ.
ದೈವ ನಿರ್ಣಯದ ಮೇರೆಗೆ ತಾವು ಪುನಃ ಆಂಧ್ರ ರಾಜಕೀಯಕ್ಕೆ ಪ್ರವೇಶಿಸುತ್ತಿರುವುದಾಗಿ ತಿರುಪತಿಯಲ್ಲಿ ಜಯಪ್ರದಾ ಮಂಗಳವಾರ (ಏ.3) ತಿಳಿಸಿದ್ದಾರೆ. ತನ್ನ ಹುಟ್ಟುಹಬ್ಬದ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಅವರು ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ ಪಡೆದರು. ಬಹುಶಃ ಅವರು ತೆಲುಗು ದೇಶಂ ಪಾರ್ಟಿ ಸೇರುವ ಸಾಧ್ಯತೆಗಳಿವೆ.
ಈ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ, ಲೋಕಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಸಮಯವಿದೆ. ಅಷ್ಟರೊಳಗೆ ಆಲೋಚಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ರಾಜಕೀಯಕ್ಕೆ ಪ್ರವೇಶಿಸುವುದಾಗಿ ಹೇಳಿದ್ದಾರೆ. ಪ್ರಸ್ತುತ ಅವರು ದರ್ಶನ್ ಅಭಿನಯದ ಭಾರಿ ಬಜೆಟ್ ಚಿತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. (ಏಜೆನ್ಸೀಸ್)