Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ಚಿತ್ರಗಳಿಗೆ ಉಪರಾಷ್ಟ್ರಪತಿ ಗ್ರೀನ್ ಸಿಗ್ನಲ್
ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳು ಬೇಕೆ ಬೇಡವೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಚಿತ್ರೋದ್ಯಮದಲ್ಲೇ ಒಮ್ಮತವಿಲ್ಲ. ಕೆಲವರು ಡಬ್ಬಿಂಗ್ ಚಿತ್ರರಂಗಕ್ಕೆ ಪೂರಕ ಎಂದರೆ ಮತ್ತೆ ಕೆಲವರು ಮಾರಕ ಎನ್ನುತ್ತಿದ್ದಾರೆ. ಈ ಗೊಂದಲದ ಪರಿಸ್ಥಿತಿಯಲ್ಲೇ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಅವರು ಡಬ್ಬಿಂಗ್ ಚಿತ್ರಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಒಂದು ಭಾಷೆಯ ಚಿತ್ರಗಳು ಮತ್ತೊಂದು ಭಾಷೆಗೆ ಡಬ್ ಆಗುವುದರಿಂದ ಒಂದು ಭಾಗದ ಸಂಸ್ಕೃತಿಯನ್ನು ಮತ್ತೊಂದು ಭಾಗದ ಜನ ಅರಿಯಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ಆದರೆ ಇತ್ತೀಚೆಗೆ ಹೆಚ್ಚಾಗಿ ಡಬ್ಬಿಂಗ್ ಚಿತ್ರಗಳು ಬರುತ್ತಿಲ್ಲ. ಇದು ಆತಂಕಕಾರಿ ಬೆಳವಣಿಗೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ ಹನ್ಸಾರಿ. ಡಬ್ಬಿಂಗ್ ಜೊತೆಗೆ ಅವರು ಸಬ್ ಟೈಟ್ಲಿಂಗ್ಗೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಬ್ಬಿಂಗ್ ಚಿತ್ರಗಳಿಗೆ ಉಪರಾಷ್ಟ್ರಪತಿಗಳು ಗ್ರೀನ್ ಸಿಗ್ನಲ್ ನೀಡಿದಂತಾಗಿದೆ. (ಏಜೆನ್ಸೀಸ್)