Don't Miss!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಅಜಿತ್ ಸದಸ್ಯತ್ವ ರದ್ದತಿಗೆ ವಕೀಲರ ಸಂಘದ ನಿರ್ಣಯ
ಅಷ್ಟಕ್ಕೂ ಈ ಉದಯೋನ್ಮುಖ ನಟ ಮಾಡಿರುವ ಘೋರ ಅಪರಾಧವಾದರೂ ಏನು ಎಂಬುದು ಎಲ್ಲರ ಪ್ರಶ್ನೆ. ಅಜಿತ್, ಪತ್ರಕರ್ತರ ಪರವಾಗಿ ಹೇಳಿಕೆ ನೀಡಿದ್ದಾರೆ, ವಕೀಲರ ಗೂಂಡಾಗಿರಿ ವಿರುದ್ಧ ಮಾತನಾಡಿದ್ದಾರೆ. ಅಜಿತ್ ತಮ್ಮ ಫೇಸ್ಬುಕ್ನಲ್ಲಿ ಪತ್ರಕರ್ತರ ಮೇಲಿನ ವಕೀಲರ ಗೂಂಡಾಗಿರಿಯನ್ನು ಖಂಡಿಸಿದ್ದರು. ಇದರಿಂದ ಕೆಂಡಾಮಂಡಲವಾದ ಲೋಕೇಶ್ ಎಂಬ ವಕೀಲರು ಅಜಿತ್ ವಿರುದ್ಧ ಹರಿಹಾಯ್ದಿದ್ದರು, ಬೆದರಿಕೆಯನ್ನೂ ಒಡ್ಡಿದ್ದರು.
ನಟ ಅಜಿತ್ ಕಾನೂನು ಪದವೀಧರರು. ಸಹಜವಾಗಿ ವಕೀಲರ ಸಂಘದಲ್ಲಿ ಸದಸ್ಯತ್ವ ಹೊಂದಿರುವವರು. ಆದರೆ ಪತ್ರಕರ್ತರ ಮೇಲೆ ವಕೀಲರು ನಡೆಸಿದ ಅಮಾನವೀಯ ಕೃತ್ಯವನ್ನು ಖಂಡಿಸಿದ್ದರಿಂದ ಇದೀಗ ಕೋಪಗೊಂಡಿರುವ ವಕೀಲರ ಸಂಘವೀಗ ಅಜಿತ್ ಸದಸ್ಯತ್ವ ರದ್ಧತಿಗೆ ನಿರ್ಣಯ ಕೈಗೊಂಡಿದೆ.
ಈ ವಿಷಯವನ್ನು ಅಜಿತ್ ಗಮನಕ್ಕೆ ತಂದು ಪ್ರತಿಕ್ರಿಯೆ ಕೇಳಿದಾಗ, ಅಜಿತ್ 'ನೋ ಕಾಮೆಂಟ್ಸ್' ಎಂದು ನಕ್ಕಿದ್ದಾರೆ. ಅವರ ನಗುವಿನಲ್ಲಿ 'ಇದರಿಂದೇನೂ ನನಗೆ ತೊಂದರೆಯಿಲ್ಲ, ನನಗಿದು ನಿರೀಕ್ಷಿತವೇ ಆಗಿತ್ತು' ಎಂಬ ಉತ್ತರ ವ್ಯಕ್ತವಾಗುವಂತಿತ್ತು. (ಒನ್ ಇಂಡಿಯಾ ಕನ್ನಡ)