Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆತಂಕದಲ್ಲಿದ್ದ ಚಿತ್ರರಂಗಕ್ಕೆ ನಿರಾಳತೆ ತಂದ ಯಡಿಯೂರಪ್ಪ ಟ್ವೀಟ್
ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಬಿಬಿಎಂಪಿಯು ಸರ್ಕಾರಕ್ಕೆ ಕೆಲವು ಪ್ರಸ್ತಾವನೆಗಳನ್ನು ಸಲ್ಲಿಸಿದ್ದು, ಚಿತ್ರಮಂದಿರಗಳಲ್ಲಿ ಶೇ 50% ಸೀಟು ಮಾತ್ರವೇ ಭರ್ತಿ ಮಾಡುವಂತೆ ಆದೇಶ ಹೊರಡಿಸಬೇಕೆಂಬ ಅಂಶವೂ ಪ್ರಸ್ತಾವನೆಯಲ್ಲಿ ಎಂಬ ಸುದ್ದಿ ಹರಿದಾಡಿ ಚಿತ್ರರಂಗದಲ್ಲಿ ಆತಂಕ ಎಬ್ಬಿಸಿತ್ತು.
ನಟ ಪುನೀತ್ ರಾಜ್ಕುಮಾರ್, ದುನಿಯಾ ವಿಜಯ್ ಸೇರಿದಂತೆ ಹಲವರು ಮಾಧ್ಯಮಗಳೊಟ್ಟಿಗೆ ಮಾತನಾಡಿ, 'ಚಿತ್ರಮಂದಿರ ಪೂರ್ಣ ಭರ್ತಿ ಮಾಡುವ ಆದೇಶವನ್ನೇ ಮುಂದುವರೆಸಬೇಕು, 50% ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ನೀಡುವ ಆದೇಶವನ್ನು ಸರ್ಕಾರ ಹೊರಡಿಸಬಾರದು' ಎಂದು ಒತ್ತಾಯಿಸಿದ್ದರು.
ಚಿತ್ರಮಂದಿರಗಳ ಕುರಿತು ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ: ನಟ, ನಿರ್ಮಾಪಕರಿಗೆ ಆತಂಕ
ಈ ವಿಷಯದ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, 'ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದುವರೆದು, 'ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ' ಎಂದು ಮನವಿ ಮಾಡಿದ್ದಾರೆ ಯಡಿಯೂರಪ್ಪ.
ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಎಲ್ಲ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್ ಗಳು ಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ಧ್ರುವ ಸರ್ಜಾ ನಟನೆಯ 'ಪೊಗರು', ದರ್ಶನ್ ನಟನೆಯ 'ರಾಬರ್ಟ್' ಸೇರಿದಂತೆ ಕೆಲವು ಸಿನಿಮಾಗಳು ಬಿಡುಗಡೆ ಆಗಿ ಒಳ್ಳೆಯ ಕಲೆಕ್ಷನ್ ಸಹ ಮಾಡಿವೆ.
ಪೂರ್ಣ ಪ್ರಮಾಣದಲ್ಲಿ ಚಿತ್ರಮಂದಿರಗಳು ತೆರೆದಿದ್ದರಿಂದ ಶಿವರಾಜ್ ಕುಮಾರ್, ಸುದೀಪ್, ಪುನೀತ್ ರಾಜ್ಕುಮಾರ್, ದುನಿಯಾ ವಿಜಯ್ ಇನ್ನೂ ಹಲವಾರು ನಟರು ತಮ್ಮ-ತಮ್ಮ ಸಿನಿಮಾಗಳನ್ನು ತೆರೆಗೆ ತರಲು ಸಜ್ಜಾಗಿ ಬಿಡುಗಡೆ ದಿನಾಂಕವನ್ನೂ ಘೋಷಿಸಿದ್ದರು.
Recommended Video
ಈ ನಡುವೆ ಇಂದು 50% ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಸುದ್ದಿ ಹೊರಬಿದ್ದು ಚಿತ್ರರಂಗದಲ್ಲಿ ಆತಂಕ ಮನೆಮಾಡಿತ್ತು. ಆದರೆ ಈಗ ಸಿಎಂ ಯಡಿಯೂರಪ್ಪ ಅವರ ಟ್ವೀಟ್ನಿಂದ ನಿರಾಳವಾಗಿದ್ದಾರೆ.