Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರಕ್ಕೆ ಬಂದ ಎಂಬಿಬಿಎಸ್ ಡಾಕ್ಟರ್ ಭಾರತಿ
ಕನ್ನಡ ಚಿತ್ರೋದ್ಯಮಕ್ಕೆ ಲೇಡಿ ಡಾಕ್ಟರ್ ಒಬ್ಬರ ಆಗಮನವಾಗಿದೆ. ಆದರೆ ಅವರು ಬಂದಿರುವುದು ರೋಗಿಗಳ ಎದೆ ಮೇಲೆ ಸ್ಟೆತಸ್ಕೋಪ್ ಇಡೋದಕ್ಕೂ ಅಲ್ಲ, ಇಂಜೆಕ್ಷನ್ ಚುಚ್ಚೋದಕ್ಕೂ ಅಲ್ಲ. ಚಿತ್ರರಸಿಕ ಹೃದಯಕ್ಕೆ ನೇರವಾಗಿ ಲಗ್ಗೆ ಹಾಕಲು ಬರುತ್ತಿದ್ದಾರೆ.
ಹೆಸರು ಡಾ.ಭಾರತಿ ವೀರಣ್ಣ. ಓದಿದ್ದು ಎಂಬಿಬಿಎಸ್, ಆದರೆ ಆಯ್ಕೆ ಮಾಡಿಕೊಂಡಿದ್ದು ಮಾತ್ರ ಬಣ್ಣದ ಜಗತ್ತು. ಆದಿಚುಂಚನಗಿರಿ ಕಾಲೇಜಲ್ಲಿ ವೈದ್ಯ ಪದವಿಯನ್ನು ಪಡೆದಿರುವ ಅವರು, ಅಭಿನಯ ನನ್ನ ಮುಖ್ಯ ವೃತ್ತಿಯಲ್ಲ. ವೈದ್ಯಕೀಯವೇ ನನ್ನ ಮೊದಲ ಆದ್ಯತೆ ಎನ್ನುತ್ತಾರೆ.
ಅಭಿನಯನದ ಮೇಲಿನ ಅಪಾರ ಆಕರ್ಷಣೆ ಅವರನ್ನು ಬಣ್ಣ ಜಗತ್ತಿಗೆ ಎಳೆದು ತಂದಿದೆ. ಅಭಿನಯ ತರಂಗದಲ್ಲಿ ನಟನೆಯ ಅ ಆ ಇ ಈ ಕೂಡ ಅಭ್ಯಾಸ ಮಾಡಿದ್ದಾರೆ. ಅಷ್ಟೇ ಅಲ್ಲ ಡಾ.ಭಾರತಿ ಅವರು ಭರತನಾಟ್ಯ ಕಲಾವಿದೆಯೂ ಹೌದು.
ಅಜಯ್ ರಾವ್ ಮುಖ್ಯಭೂಮಿಕೆಯಲ್ಲಿರುವ 'ಕೃಷ್ಣ ಸನ್ ಆಫ್ ಸಿಎಂ' ಚಿತ್ರದಲ್ಲಿ ನಾಯಕಿಯಾಗಿ ಡಾ. ಭಾರತಿ ಕಾಣಿಸಲಿದ್ದಾರೆ. ಈಗಾಗಲೆ ಬೀದರ್ ಸುತ್ತಮುತ್ತ 21 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಎಂ ಎಸ್ ರಮೇಶ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಯೋಗಿಶ್ ಹುಣಸೂರು ನಿರ್ಮಿಸಿದ್ದಾರೆ. (ಒನ್ಇಂಡಿಯಾ ಕನ್ನಡ)