Don't Miss!
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿನಗರಕ್ಕೆ ಬಂದ ಎಂಬಿಬಿಎಸ್ ಡಾಕ್ಟರ್ ಭಾರತಿ
ಕನ್ನಡ ಚಿತ್ರೋದ್ಯಮಕ್ಕೆ ಲೇಡಿ ಡಾಕ್ಟರ್ ಒಬ್ಬರ ಆಗಮನವಾಗಿದೆ. ಆದರೆ ಅವರು ಬಂದಿರುವುದು ರೋಗಿಗಳ ಎದೆ ಮೇಲೆ ಸ್ಟೆತಸ್ಕೋಪ್ ಇಡೋದಕ್ಕೂ ಅಲ್ಲ, ಇಂಜೆಕ್ಷನ್ ಚುಚ್ಚೋದಕ್ಕೂ ಅಲ್ಲ. ಚಿತ್ರರಸಿಕ ಹೃದಯಕ್ಕೆ ನೇರವಾಗಿ ಲಗ್ಗೆ ಹಾಕಲು ಬರುತ್ತಿದ್ದಾರೆ.
ಹೆಸರು ಡಾ.ಭಾರತಿ ವೀರಣ್ಣ. ಓದಿದ್ದು ಎಂಬಿಬಿಎಸ್, ಆದರೆ ಆಯ್ಕೆ ಮಾಡಿಕೊಂಡಿದ್ದು ಮಾತ್ರ ಬಣ್ಣದ ಜಗತ್ತು. ಆದಿಚುಂಚನಗಿರಿ ಕಾಲೇಜಲ್ಲಿ ವೈದ್ಯ ಪದವಿಯನ್ನು ಪಡೆದಿರುವ ಅವರು, ಅಭಿನಯ ನನ್ನ ಮುಖ್ಯ ವೃತ್ತಿಯಲ್ಲ. ವೈದ್ಯಕೀಯವೇ ನನ್ನ ಮೊದಲ ಆದ್ಯತೆ ಎನ್ನುತ್ತಾರೆ.
ಅಭಿನಯನದ ಮೇಲಿನ ಅಪಾರ ಆಕರ್ಷಣೆ ಅವರನ್ನು ಬಣ್ಣ ಜಗತ್ತಿಗೆ ಎಳೆದು ತಂದಿದೆ. ಅಭಿನಯ ತರಂಗದಲ್ಲಿ ನಟನೆಯ ಅ ಆ ಇ ಈ ಕೂಡ ಅಭ್ಯಾಸ ಮಾಡಿದ್ದಾರೆ. ಅಷ್ಟೇ ಅಲ್ಲ ಡಾ.ಭಾರತಿ ಅವರು ಭರತನಾಟ್ಯ ಕಲಾವಿದೆಯೂ ಹೌದು.
ಅಜಯ್ ರಾವ್ ಮುಖ್ಯಭೂಮಿಕೆಯಲ್ಲಿರುವ 'ಕೃಷ್ಣ ಸನ್ ಆಫ್ ಸಿಎಂ' ಚಿತ್ರದಲ್ಲಿ ನಾಯಕಿಯಾಗಿ ಡಾ. ಭಾರತಿ ಕಾಣಿಸಲಿದ್ದಾರೆ. ಈಗಾಗಲೆ ಬೀದರ್ ಸುತ್ತಮುತ್ತ 21 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಎಂ ಎಸ್ ರಮೇಶ್ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಯೋಗಿಶ್ ಹುಣಸೂರು ನಿರ್ಮಿಸಿದ್ದಾರೆ. (ಒನ್ಇಂಡಿಯಾ ಕನ್ನಡ)