Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ (ಶುಕ್ರವಾರ) ಆರು ಕನ್ನಡ ಚಿತ್ರಗಳ ಬಿಡುಗಡೆ
ಶುಕ್ರವಾರ ಅಂದ್ರೆ ಸಿನಿ ಹಬ್ಬ. ಈ ವಾರ ಆರು ಕನ್ನಡ ಸಿನಿಮಾಗಳು ತೆರೆಗೆ ಬರುತ್ತಿದೆ. ವಿಶೇಷ ಅಂದರೆ, ಈ ಎಲ್ಲವೂ ಹೊಸ ನಿರ್ದೇಶಕರ ಸಿನಿಮಾಗಳಾಗಿವೆ.
'ಉಂಡುಬಾ', 'ನನ್ನ ಪ್ರಕಾರ', 'ರಾಂಧವ', 'ಫ್ಯಾನ್', 'ಕಲ್ಪನಾ ವಿಲಾಸಿ', 'ವಿಜಯಯಾತ್ರ' ಈ ವಾರ ಆಗಸ್ಟ್ 23 ರಂದು ರಿಲೀಸ್ ಆಗುತ್ತಿರುವ ಸಿನಿಮಾಗಳಾಗಿವೆ.
'ಗೀತಾ' ಸಿನಿಮಾಗೆ ಪುನೀತ್ ರಾಜ್ ಕುಮಾರ್ ಗಾಯಕ
'ಉಂಡುಬಾ' ಪಕ್ಕಾ ಆಕ್ಷನ್ ಕಮ್ ಲವ್ ಸ್ಟೋರಿ ಹೊಂದಿದ್ದು, ಕಡಲ ತೀರದ ಕಥೆ ಹೊಂದಿದೆ. ಈಗಾಗಲೇ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ನಟ ಪವನ್ ಉದ್ದದ ಡೈಲಾಗ್ ಹೇಳಿ ದಾಖಲೆ ಮಾಡಿದ್ದಾರೆ. ನಾಯಕಿಯಾಗಿ ಚಿರಶ್ರೀ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಚಿತ್ರದ ನಿರ್ದೇಶನ ಮಾಡಿದ್ದು, ಹೇಮಂತ್ ರಾವ್ ಹಾಗೂ ವೆಂಕಟ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ.
'ನನ್ನ ಪ್ರಕಾರ' ಪ್ರಿಯಾ ಮಣಿ, ಕಿಶೋರ್ ಹಾಗೂ ಮಯೂರಿ ನಟನೆಯ ಸಿನಿಮಾವಾಗಿದೆ. ವಿನಯ್ ಬಾಲಾಜಿ ಚಿತ್ರದ ನಿರ್ದೇಶನ ಮಾಡಿದ್ದಾರೆ.
'ರಾಂಧವ' ಭುವನ್ ಪೊನ್ನಣ್ಣ ನಟನೆಯ ಸಿನಿಮಾವಾಗಿದೆ. ಸುನೀಲ್ ಆಚಾರ್ಯ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಇದೊಂದು ಕ್ರೈಮ್ ಥ್ರಿಲ್ಲರ್ ಸಿನಿಮಾವಾಗಿದೆ.
'ಬಡವ ರಾಸ್ಕಲ್' ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಸಾಥ್
ಈ ಸಿನಿಮಾಗಳ ಜೊತೆಗೆ 'ಫ್ಯಾನ್', 'ಕಲ್ಪನಾ ವಿಲಾಸಿ', ಹಾಗೂ 'ವಿಜಯಯಾತ್ರ' ಚಿತ್ರಗಳು ಸಹ ಇದೇ ಶುಕ್ರವಾರ ಚಿತ್ರಮಂದಿರಕ್ಕೆ ಆಗಮಿಸುತ್ತಿದೆ.