Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಕನ್ನಡ ಚಿತ್ರರಂಗದ ಗಣ್ಯರು
66ನೇ ರಾಷ್ಟೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು (ಡಿಸೆಂಬರ್ 23) ನಡೆದಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ವಿತರಣೆ ಮಾಡಿದರು.
ನಿರ್ದೇಶಕ ರಿಷಭ್ ಶೆಟ್ಟಿ ಸ್ವರ್ಣ ಕಮಲ ಪ್ರಶಸ್ತಿಯನ್ನು ಪಡೆದರು. ಅವರ ನಿರ್ದೇಶನ ಹಾಗೂ ನಿರ್ಮಾಣದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರ 2018ನೇ ಸಾಲಿನ ಅತ್ಯುತ್ತಮ ಮಕ್ಕಳ ಸಿನಿಮಾವಾಗಿದೆ.
ನಾತಿಚರಾಮಿ ಚಿತ್ರಕ್ಕೆ ಶ್ರೇಷ್ಠ ಪ್ರಾದೇಶಿಕ ಭಾಷೆ ರಾಷ್ಟ್ರಪ್ರಶಸ್ತಿ
'ಒಂದಲ್ಲ ಎರಡಲ್ಲ' ಸಿನಿಮಾದ ನಟನೆಗಾಗಿ ಅತ್ಯುತ್ತಮ ಬಾಲ ನಟ ಪ್ರಶಸ್ತಿಯನ್ನು ರೋಹಿತ್ ಪಡೆದಿದ್ದಾರೆ. ಅತ್ಯುತ್ತಮ ರಾಷ್ಟ್ರೀಯ ಭಾವೈಕ್ಯತೆ ಸಿನಿಮಾ ಪ್ರಶಸ್ತಿ ಕೂಡ ಇದೇ ಸಿನಿಮಾಗೆ ಬಂದಿದೆ. ಈ ಸಿನಿಮಾವನ್ನು ಉಮಾಪತಿ ನಿರ್ಮಾಣ ಮಾಡಿದ್ದು, ಸತ್ಯಪ್ರಕಾಶ್ ನಿರ್ದೇಶನ ಇದೆ.
ಅತಿ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ 3 ಕನ್ನಡ ಸಿನಿಮಾಗಳು
'ಅಂದಾದುನ್' ಹಿಂದಿ ಸಿನಿಮಾದ ಚಿತ್ರಕತೆಯಲ್ಲಿ ಕನ್ನಡ ನಿರ್ದೇಶಕ ಹೇಮಂತ್ ರಾವ್ ಕೆಲಸ ಮಾಡಿದ್ದರು. ಈ ಚಿತ್ರಕ್ಕಾಗಿ ಅವರಿಗೂ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಇದರೊಂದಿಗೆ 'ಕೆಜಿಎಫ್' ಸಿನಿಮಾದ ಸಾಹಸ ನಿರ್ದೇಶಕ ಅಂಬುಮಣಿ ಅತ್ಯುತ್ತಮ ಸಾಹಸ ನಿರ್ದೇಶಕ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.