twitter
    For Quick Alerts
    ALLOW NOTIFICATIONS  
    For Daily Alerts

    ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಕನ್ನಡ ಚಿತ್ರರಂಗದ ಗಣ್ಯರು

    |

    66ನೇ ರಾಷ್ಟೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು (ಡಿಸೆಂಬರ್ 23) ನಡೆದಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರಶಸ್ತಿಗಳನ್ನು ವಿತರಣೆ ಮಾಡಿದರು.

    ನಿರ್ದೇಶಕ ರಿಷಭ್ ಶೆಟ್ಟಿ ಸ್ವರ್ಣ ಕಮಲ ಪ್ರಶಸ್ತಿಯನ್ನು ಪಡೆದರು. ಅವರ ನಿರ್ದೇಶನ ಹಾಗೂ ನಿರ್ಮಾಣದ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರ 2018ನೇ ಸಾಲಿನ ಅತ್ಯುತ್ತಮ ಮಕ್ಕಳ ಸಿನಿಮಾವಾಗಿದೆ.

    ನಾತಿಚರಾಮಿ ಚಿತ್ರಕ್ಕೆ ಶ್ರೇಷ್ಠ ಪ್ರಾದೇಶಿಕ ಭಾಷೆ ರಾಷ್ಟ್ರಪ್ರಶಸ್ತಿನಾತಿಚರಾಮಿ ಚಿತ್ರಕ್ಕೆ ಶ್ರೇಷ್ಠ ಪ್ರಾದೇಶಿಕ ಭಾಷೆ ರಾಷ್ಟ್ರಪ್ರಶಸ್ತಿ

    'ಒಂದಲ್ಲ ಎರಡಲ್ಲ' ಸಿನಿಮಾದ ನಟನೆಗಾಗಿ ಅತ್ಯುತ್ತಮ ಬಾಲ ನಟ ಪ್ರಶಸ್ತಿಯನ್ನು ರೋಹಿತ್ ಪಡೆದಿದ್ದಾರೆ. ಅತ್ಯುತ್ತಮ ರಾಷ್ಟ್ರೀಯ ಭಾವೈಕ್ಯತೆ ಸಿನಿಮಾ ಪ್ರಶಸ್ತಿ ಕೂಡ ಇದೇ ಸಿನಿಮಾಗೆ ಬಂದಿದೆ. ಈ ಸಿನಿಮಾವನ್ನು ಉಮಾಪತಿ ನಿರ್ಮಾಣ ಮಾಡಿದ್ದು, ಸತ್ಯಪ್ರಕಾಶ್ ನಿರ್ದೇಶನ ಇದೆ.

    66th National Film Awards Ceremony

    ಅತಿ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ 3 ಕನ್ನಡ ಸಿನಿಮಾಗಳುಅತಿ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ 3 ಕನ್ನಡ ಸಿನಿಮಾಗಳು

    'ಅಂದಾದುನ್' ಹಿಂದಿ ಸಿನಿಮಾದ ಚಿತ್ರಕತೆಯಲ್ಲಿ ಕನ್ನಡ ನಿರ್ದೇಶಕ ಹೇಮಂತ್ ರಾವ್ ಕೆಲಸ ಮಾಡಿದ್ದರು. ಈ ಚಿತ್ರಕ್ಕಾಗಿ ಅವರಿಗೂ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಇದರೊಂದಿಗೆ 'ಕೆಜಿಎಫ್' ಸಿನಿಮಾದ ಸಾಹಸ ನಿರ್ದೇಶಕ ಅಂಬುಮಣಿ ಅತ್ಯುತ್ತಮ ಸಾಹಸ ನಿರ್ದೇಶಕ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

    English summary
    66th national film awards ceremony.
    Monday, December 23, 2019, 16:59
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X