Don't Miss!
- News ಕೊಳ್ಳೇಗಾಲ ಶಾಸಕರ ಕಾರು ಅಪಘಾತ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುರುವಿನಿಂದ ಗುರುವಿಗಾಗಿ ಗುರುವಿಗೋಸ್ಕರ ಜಗ್ಗೇಶ್
ಗುರುರಾಜ ಫಿಲಂಸ್ ದ್ವಿತೀಯ ಚಿತ್ರ ಅದ್ವಿತೀಯ ಚಿತ್ರವಾಗಲು ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಪರಮ ಭಕ್ತ ಹೆಸರಾಂತ ನಟ, ಸ್ನೇಹ ಜೀವಿ, ಸಹೃದಯಿ, ರಾಜಕಾರಣಿ ಜಗ್ಗೇಶ್ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದಾರೆ.
ಜಗ್ಗೇಶ್ ಪುತ್ರ ಗುರುರಾಜ್ ನಾಯಕ ನಟರಾಗಿ ಅಭಿನಯಿಸಲಿರುವ 'ಗುರು' ಚಿತ್ರಕ್ಕೆ ಮಂತ್ರಾಲಯದ ಮೂಲ ಬೃಂದಾವನ ಹಾಗೂ ಅದೇ ಸ್ಥಳದಲ್ಲಿರುವ ಶ್ರೀ ಆಂಜನೇಯನ ಗುಡಿಯನ್ನು ಜಗ್ಗೇಶ್ ಅವರು ವಿಶೇಷ ಅನುಮತಿಯೊಂದಿಗೆ ಚಿತ್ರದ ಟೈಟಲ್ ಕಾರ್ಡ್ಗಾಗಿ ಚಿತ್ರೀಕರಿಸಿಕೊಂಡು ಬಂದಿದ್ದಾರೆ.
ನಟ ಜಗ್ಗೇಶ್ ನಿರ್ದೇಶಕರಾಗುತ್ತಿರುವ ಈ ಹೊತ್ತಿನಲ್ಲಿ ಚಿತ್ರರಂಗದಲ್ಲಿ 30 ವಸಂತಗಳನ್ನು ಸದ್ಯದಲ್ಲೇ ಕಾಣಲಿದ್ದಾರೆ. ಆ ಸವಿನೆನಪಿಗಾಗಿ ಅವರ ಪುತ್ರನ ನಾಯಕತ್ವದಲ್ಲಿ ತಾವೇ ನಿರ್ದೇಶಕರೂ ಆಗಿ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಕಳೆದ ಗುರುವಾರ ಮಂತ್ರಾಲಯದಲ್ಲಿ ಜನಸ್ತೋಮದ ನಡುವೆ ವೇದಘೋಷಗಳ ಪಠನವನ್ನು ದೇವಸ್ಥಾನದ ಸುತ್ತಮುತ್ತ ಭಕ್ತರ ಒಡನಾಟವನ್ನು ಛಾಯಾಗ್ರಾಹಕ ರಮೇಶ ಬಾಬು ಚಿತ್ರಿಸಿಕೊಂಡಿದ್ದಾರೆ.
ಜೂನ್ ತಿಂಗಳಲ್ಲಿ ಸೆಟ್ಟೇರಲಿರುವ 'ಗುರು' ಚಿತ್ರಕ್ಕಾಗಿ ಗುರುರಾಜ್ ವಿಶೇಷ ತರಬೇತಿಗಳನ್ನು ಪಡೆಯುತ್ತಿದ್ದಾರೆ. ತೂಕ ಇಳಿಸುವುದರಿಂದ ಹಿಡಿದು ಕಿಕ್ ಬಾಕ್ಸಿಂಗ್ವರೆಗೆ ಅನೇಕ ವಿಶೇಷಣಗಳನ್ನು ಅಪ್ಪನ ನಿರ್ದೇಶನದಲ್ಲಿ ತುಂಬಲು ಗುರುರಾಜ್ ಶ್ರಮಿಸುತ್ತಿದ್ದಾರೆ. ಇವರ ಸಹೋದರ ಯತಿರಾಜ್ ಕೂಡ 'ಗುರು' ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಆನಂದ್ ಅವರ ಸಹ ನಿರ್ದೇಶನ, ವಿನಯ್ ಚಂದ್ರ ಸಂಗೀತ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ, ರವಿ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಚಿತ್ರದ ನಾಯಕಿ ಹಾಗೂ ಇನ್ನಿತರ ಪಾತ್ರ ವರ್ಗದ ಆಯ್ಕೆಯಲ್ಲಿದ್ದಾರೆ ಜಗ್ಗೇಶ್. (ಒನ್ಇಂಡಿಯಾ ಕನ್ನಡ)