Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿಶಂಕರ್, ಅರ್ಜುನ್ ಜನ್ಯ ಬೆಳವಣಿಗೆ ಬಗ್ಗೆ ಸಂತಸ ವ್ಯಕ್ತ ಪಡಿಸಿದ ಸುದೀಪ್
ನಟ ಸುದೀಪ್ ತಾವು ಬೆಳೆಯುವುದರ ಜೊತೆಗೆ ಅನೇಕರನ್ನು ಚಿತ್ರರಂಗದಲ್ಲಿ ಬೆಳೆಸಿದ್ದಾರೆ. ಆ ಪೈಕಿ ಪ್ರಮುಖರು ನಟ ರವಿಶಂಕರ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ.
ಈ ಇಬ್ಬರು ಪ್ರತಿಭಾವಂತರಿಗೆ ಮರು ಜೀವ ನೀಡಿದ್ದ ಸಿನಿಮಾ 'ಕೆಂಪೇಗೌಡ'. ಈ ಸಿನಿಮಾ ಸುದೀಪ್ ನಿರ್ದೇಶನ ಹಾಗೂ ನಟನೆಯಲ್ಲಿ ಬಂದಿತ್ತು. ಇಂತಹ ಸಿನಿಮಾ ಬಿಡುಗಡೆಯಾಗಿ ಇಂದಿಗೆ 8 ವರ್ಷ ತುಂಬಿದೆ. ಈ ಸಂತಸವನ್ನು ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೇಡಿ ರವಿಶಂಕರ್ ಅಸಲಿಯತ್ತು ಬಯಲು ಮಾಡಿದ ಕಿಚ್ಚ ಸುದೀಪ್.!
ಸಿನಿಮಾದ ಬಗ್ಗೆ ಬರೆದುಕೊಂಡಿರುವ ಸುದೀಪ್ ''ನನ್ನ 'ಕೆಂಪೇಗೌಡ' ಸಿನಿಮಾಗಿಂತ ನಟ ರವಿಶಂಕರ್ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಬೆಳವಣಿಗೆ ನನಗೆ ಖುಷಿ ನೀಡಿದೆ. 'ಕೆಂಪೇಗೌಡ' ಸಿನಿಮಾದಿಂದ ಇಂದಿನವರೆಗೆ ಅವರ ಜರ್ನಿ ಮುಂದುವರೆದಿದೆ. ಜೀವನ ನೀಡಿದ್ದನ್ನು ಅವರು ನಿಷ್ಟೆಯಿಂದ ಮಾಡುತ್ತಿದ್ದಾರೆ. ಅವರನ್ನು ಒಪ್ಪಿಕೊಂಡು, ಪ್ರೀತಿ ನೀಡುತ್ತಿರುವ ಎಲ್ಲ ಸ್ನೇಹಿತರಿಗೆ ಧನ್ಯವಾದ'' ಎಂದಿದ್ದಾರೆ.
More than my film kempegowda,, Im very happy that @ArjunjanyaAJ n Ravishankar made there mark n there journey from then til today has been their sheer honesty towards what life has offered. Mch luv to all u frnzz for accepting them n for loving them.. 🤗🤗🤗🙏🥂
— Kichcha Sudeepa (@KicchaSudeep) March 10, 2019
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಟ ರವಿಶಂಕರ್ 'ಕೆಂಪೇಗೌಡ' ಸಿನಿಮಾಗೆ ಮುಂಚೆ ಕೆಲ ಚಿತ್ರಗಳಲ್ಲಿ ಕೆಲಸ ಮಾಡಿದ್ದರು. ಆದರೆ, ಈ ಸಿನಿಮಾ ಅವರಿಬ್ಬರ ಕೆರಿಯರ್ ಗೆ ದೊಡ್ಡ ಬ್ರೇಕ್ ನೀಡಿತ್ತು. ಅಲ್ಲಿಂದ ಶುರುವಾಗಿ ಇವತ್ತಿನ ವರೆಗೂ ಈ ಇಬ್ಬರು ಕನ್ನಡ ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.