Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
99% ಬ್ಲಾಕ್ ಆಗಿತ್ತು ಅರ್ಜುನ್ ಜನ್ಯ ಹೃದಯ: ಇನ್ನೆರಡು ಗಂಟೆ ತಡ ಆಗಿದ್ರೆ.?
ತೀವ್ರ ಎದೆ ನೋವು, ಹೊಟ್ಟೆ ನೋವು, ಬೆನ್ನು ನೋವು ಮತ್ತು ತಲೆ ನೋವು ಕಾಣಿಸಿಕೊಂಡಿದ್ರಿಂದಾಗಿ ಕಳೆದ ಭಾನುವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ದಾಖಲಾಗಿದ್ದರು. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದ ಅರ್ಜುನ್ ಜನ್ಯಗೆ ಚಿಕಿತ್ಸೆ ನೀಡುತ್ತಿರುವಾಗಲೇ ಅವರಿಗೆ ಕಾರ್ಡಿಯಾಕ್ ಪ್ರಾಬ್ಲಂ ಇರುವುದು ಕೂಡ ವೈದ್ಯರ ಅರಿವಿಗೆ ಬಂದಿದೆ.
Recommended Video
ಅರ್ಜುನ್ ಜನ್ಯ ರವರ ಹೃದಯ 99% ಬ್ಲಾಕ್ ಆಗಿತ್ತು. ಇಂಪೆನ್ಡಿಂಗ್ ಹಾರ್ಟ್ ಅಟ್ಯಾಕ್ ಸ್ಟೇಜ್ ತಲುಪಿದ್ದ ಅರ್ಜುನ್ ಜನ್ಯಗೆ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮೈಸೂರಿನ ಆಸ್ಪತ್ರೆ ವೈದ್ಯರು ಆಂಜಿಯೋಗ್ರಾಮ್ ಮತ್ತು ಆಂಜಿಯೋಪ್ಲಾಸ್ಟಿ ಮಾಡಿ, ಹೃದಯಕ್ಕೆ ಸ್ಟೆಂಟ್ ಅಳವಡಿಸಿದ್ದಾರೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಎದೆ ನೋವು: ಆಸ್ಪತ್ರೆಗೆ ದಾಖಲು
ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭಿಸಿದ್ದರಿಂದಾಗಿ, ಪ್ರಾಣಾಪಾಯದಿಂದ ಅರ್ಜುನ್ ಜನ್ಯ ಪಾರಾಗಿದ್ದಾರೆ. ಇನ್ನೆರಡು ಗಂಟೆ ತಡವಾಗಿದ್ದರೂ, ಅರ್ಜುನ್ ಜನ್ಯ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿತ್ತು ಎಂದಿದ್ದಾರೆ ವೈದ್ಯರು.
ಅರ್ಜುನ್ ಜನ್ಯ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ವೈದ್ಯರ ತಂಡ
''ಅರ್ಜುನ್ ಜನ್ಯ ಹೃದಯ 99% ಬ್ಲಾಕ್ ಆಗಿತ್ತು. ಅದು Impending Heart Attack. ಇನ್ನೇನು 2-4 ಗಂಟೆ ಬಿಟ್ಟಿದ್ದರೆ, ಕೆಟ್ಟ ಪರಿಣಾಮ ಬೀರುತ್ತಿತ್ತು'' ಎಂದು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ, ಹೃದ್ರೋಗ ತಜ್ಞ ಆದಿತ್ಯ ಉಡುಪ ಹೇಳಿದ್ದಾರೆ.
ಆಂಜಿಯೋಪ್ಲಾಸ್ಟಿ ಬಳಿಕ ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎದೆ ನೋವು, ಬೆನ್ನು ನೋವು, ಹೊಟ್ಟೆ ನೋವು ಮತ್ತು ತಲೆ ನೋವು ವಾಸಿ ಆಗಿದೆ. ಸಿಸಿಯುದಿಂದ ಅವರನ್ನ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.