Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಿತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ
ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಈ ವಾರೆಂಟ್ ಅನ್ವಯ ರಕ್ಷಿತ್ ಶೆಟ್ಟಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
'ಕಿರಿಕ್ ಪಾರ್ಟಿ' ಚಿತ್ರದ ಹಾಡಿಗೆ ಸಂಬಂಧಿಸಿದಂತೆ ಲಹರಿ ಆಡಿಯೋ ಸಂಸ್ಥೆ ರಕ್ಷಿತ್ ಶೆಟ್ಟಿ ಮಾಲಿಕತ್ವದ ಪರಂವಾ ಸ್ಟುಡಿಯೋ ವಿರುದ್ದ ಕೃತಿಚೌರ್ಯ ಹಿನ್ನೆಲೆ ಕೇಸ್ ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದೆ. ಮುಂದೆ ಓದಿ...
ರಕ್ಷಿತ್ ಶೆಟ್ಟಿ-ಅಜನೀಶ್ ವಿರುದ್ಧ ವಾರೆಂಟ್
'ಕಿರಿಕ್ ಪಾರ್ಟಿ' ಚಿತ್ರದಲ್ಲಿ 'ಶಾಂತಿ ಕ್ರಾಂತಿ' ಸಿನಿಮಾದ ಹಾಡೊಂದನ್ನು ಅನುಮತಿ ಇಲ್ಲದ ಬಳಸಿದ್ದಕ್ಕಾಗಿ ಲಹರಿ ಸಂಸ್ಥೆ ದೂರು ದಾಖಲಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಂವಾ ಸ್ಟುಡಿಯೋ ಮಾಲೀಕ ರಕ್ಷಿತ್ ಶೆಟ್ಟಿ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಬಂಧನ ರಹಿತ ವಾರೆಂಟ್ ಜಾರಿಯಾಗಿದೆ.
'ಅನ್ನ ಕಿತ್ತುತಿನ್ನೋ ರಣಹದ್ದು ಬಂದರೂ ನಗುವಿನಲ್ಲಿ ನೋಡುವ ಬಂಗಾರದ ಹೃದಯ': ರಕ್ಷಿತ್ ಬಗ್ಗೆ ಜಗ್ಗೇಶ್ ಮಾತು
ವಿಚಾರಣೆ ಹಾಜರಾಗಿಲ್ಲ
2017ರಲ್ಲಿ ಕಾಪಿ ರೈಟ್ ಕಾಯಿದೆ ಅಡಿ ರಕ್ಷಿತ್ ಶೆಟ್ಟಿ ಮತ್ತು ಅಜನೀಶ್ ವಿರುದ್ಧ ದೂರು ದಾಖಲಾಗಿತ್ತು. ಇದುವರೆಗೂ ಈ ಕೇಸ್ಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಆ ಕಾರಣದಿಂದ 9ನೇ ಎಸಿಎಂಎಂ ಕೋರ್ಟ್ ವಾರೆಂಟ್ ಜಾರಿ ಮಾಡಿ ನೋಟೀಸ್ ನೀಡಿದೆ.
ಬಂಧನ ಸಾಧ್ಯತೆ!
ಮ್ಯಾಜಿಸ್ಟ್ರೇಟು ನ್ಯಾಯಾಲಯ ಬಂಧನ ರಹಿತ ವಾರೆಂಟ್ ಜಾರಿ ಮಾಡಿರುವ ಹಿನ್ನೆಲೆ ಖುದ್ದು ರಕ್ಷಿತ್ ಶೆಟ್ಟಿ ಮತ್ತು ಅಜನೀಶ್ ಅವರೇ ಪೊಲೀಸರಿಗೆ ಶರಣಾಗಬೇಕಿದೆ ಅಥವಾ ಪೊಲೀಸರೇ ಇಬ್ಬರು ಬಂಧಿಸುವ ಸಾಧ್ಯತೆ ಇದೆ. ಬಂಧಿಸಿದ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಾಗಿದೆ.
ಶ್ರೀಮನ್ನಾರಾಯಣನ ಮೇಲೆ ಮುನಿಸಿಕೊಂಡ ಫ್ಯಾನ್ಸ್: ಇದ್ದಕ್ಕಿದ್ದಂತೆ ಪ್ರೋಮೋ ಮಾಯವಾಗಿದ್ದೇಕೆ?
ಏನಿದು 'ಕಿರಿಕ್ ಪಾರ್ಟಿ' ವಿವಾದ
1991ರಲ್ಲಿ ತೆರೆಕಂಡಿದ್ದ ಶಾಂತಿ ಕ್ರಾಂತಿ ಸಿನಿಮಾದ 'ಮಧ್ಯರಾತ್ರಿಯಲ್ಲಿ ಹೈವೇ ರಸ್ತೆಯಲ್ಲಿ...' ಹಾಡನ್ನು 2017ರ ಕಿರಿಕ್ ಪಾರ್ಟಿ ಚಿತ್ರದಲ್ಲಿ ಬಳಸಲಾಗಿದೆ. ಮೂಲ ಹಾಡಿನ ಹಕ್ಕು ಲಹರಿ ಸಂಸ್ಥೆ ಬಳಿ ಇದ್ದು, ಇದಕ್ಕಾಗಿ ಅನುಮತಿ ಪಡೆದಿಲ್ಲ. ಹಂಸಲೇಖ ಸಂಗೀತ ನೀಡಿದ್ದ ಶಾಂತಿ ಕ್ರಾಂತಿ ಚಿತ್ರದ ಹಾಡುಗಳ ಹಕ್ಕು ಲಹರಿ ಸಂಸ್ಥೆ ಬಳಿ ಇದೆ.