Just In
Don't Miss!
- News
50 ಸಾವಿರ ಪಾಯಿಂಟ್ ದಾಟಿಕ್ದ ಸೂಚ್ಯಂಕ, ಹೂಡಿಕೆದಾರರು ಸಂತಸ
- Sports
ಐಪಿಎಲ್ 2021: ಬಿಡುಗಡೆಗೊಳಿಸಿದಕ್ಕೆ ಧನ್ಯವಾದ ಎಂದ ಪಾರ್ಥಿವ್ ಪಟೇಲ್
- Automobiles
ಮೂರು ತಿಂಗಳಲ್ಲಿ ಆರು ಕೋಟಿಗೂ ಹೆಚ್ಚು ದಂಡ ತೆತ್ತ ವಾಹನ ಸವಾರರು
- Finance
50 ಸಾವಿರ ಪಾಯಿಂಟ್ ಗಡಿ ದಾಟಿದ ಸೆನ್ಸೆಕ್ಸ್; ನಿಫ್ಟಿ 14700 ಪಾಯಿಂಟ್ ಆಚೆಗೆ
- Lifestyle
ನಿಮ್ಮ ಕೋಮಲ ತುಟಿಗಳಿಗಾಗಿ ಮನೆಯಲ್ಲಿಯೇ ತಯಾರಿಸಿ ಈ ಲಿಪ್ ಬಾಮ್ ಗಳನ್ನು...
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿಜಯ್ 'ಮೆರ್ಸಲ್' ಚಿತ್ರದ ವಿರುದ್ಧ ಮಧುರೈ ಪೊಲೀಸ್ ಠಾಣೆಗೆ ದೂರು!
ಒಂದಲ್ಲ ಒಂದು ಕಾರಣಕ್ಕೆ ದೊಡ್ಡ ಸುದ್ದಿ ಮಾಡುತ್ತಿರುವ ವಿಜಯ್ ನಟನೆಯ 'ಮೆರ್ಸಲ್' ಚಿತ್ರದ ವಿರುದ್ಧ ಈಗ ಮಧುರೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದಲ್ಲಿರುವ ಒಂದು ಸಂಭಾಷಣೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
'ನಮಗೆ ದೇಗುಲಗಳು ಬೇಕಾಗಿಲ್ಲ, ನಮಗೆ ಆಸ್ಪತ್ರೆಗಳು ಬೇಕು' ಎಂಬರ್ಥ ಬರುವ ಡೈಲಾಗ್ ಈಗ ವಿವಾದಕ್ಕೆ ಕಾರಣ ಆಗಿದೆ. ಈ ಸಂಭಾಷಣೆಯಿಂದ ಧಾರ್ಮಿಕ ಭಾವನೆಗಳಿಗೆ ತೊಂದರೆಯಾಗಿದೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಧುರೈ ಪೊಲೀಸರಿಗೆ ದೂರು ನೀಡಿದ್ದಾರೆ.
ಇದಲ್ಲದೆ ಚಿತ್ರದಲ್ಲಿ ಮೋದಿ ಅವರ ಜಿ.ಎಸ್.ಟಿ, ಡಿಜಿಟಲ್ ಇಂಡಿಯಾ ಯೋಜನೆಯನ್ನು ತಪ್ಪಾಗಿ ತೋರಿಸಲಾಗಿದೆ ಎಂದು ಬಿಜೆಪಿ ನಾಯಕರಾದ ರಾಜ, ತಮಿಳ್ ಇಸೈ ಸೌಂದರರಾಜನ್, ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಚಿತ್ರದ ವಿರುದ್ಧ ಕಿಡಿಕಾರಿದ್ದರು. ಜೊತೆಗೆ ಡಿ ವೈ ಎಫ್ ಐ ಸಂಘಟನೆ ಸದಸ್ಯರು ಪ್ರತಿಭಟನೆ ಕೂಡ ನಡೆಸಿದ್ದರು.
ಅಂದಹಾಗೆ, 'ಮೆರ್ಸಲ್' ಸಿನಿಮಾದಲ್ಲಿ ವಿಜಯ್, ಸಮಂತಾ, ನಿತ್ಯಾ ಮೆನನ್, ಕಾಜಲ್ ಅಗರವಾಲ್ ನಟಿಸಿದ್ದಾರೆ. ಅಕ್ಟೋಬರ್ 18ರಂದು ತೆರೆಗೆ ಬಂದಿದ್ದ ಈ ಚಿತ್ರ ಸದ್ಯ ನೂರು ಕೋಟಿ ಕಲೆಕ್ಷನ್ ಮಾಡಿದೆ.