Don't Miss!
- News Gold & Silver Price: ಮತ್ತೆ ಏರಿದ ಚಿನ್ನದ ದರ, ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ 'ಮೆರ್ಸಲ್' ಚಿತ್ರದ ವಿರುದ್ಧ ಮಧುರೈ ಪೊಲೀಸ್ ಠಾಣೆಗೆ ದೂರು!
ಒಂದಲ್ಲ ಒಂದು ಕಾರಣಕ್ಕೆ ದೊಡ್ಡ ಸುದ್ದಿ ಮಾಡುತ್ತಿರುವ ವಿಜಯ್ ನಟನೆಯ 'ಮೆರ್ಸಲ್' ಚಿತ್ರದ ವಿರುದ್ಧ ಈಗ ಮಧುರೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದಲ್ಲಿರುವ ಒಂದು ಸಂಭಾಷಣೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
'ನಮಗೆ ದೇಗುಲಗಳು ಬೇಕಾಗಿಲ್ಲ, ನಮಗೆ ಆಸ್ಪತ್ರೆಗಳು ಬೇಕು' ಎಂಬರ್ಥ ಬರುವ ಡೈಲಾಗ್ ಈಗ ವಿವಾದಕ್ಕೆ ಕಾರಣ ಆಗಿದೆ. ಈ ಸಂಭಾಷಣೆಯಿಂದ ಧಾರ್ಮಿಕ ಭಾವನೆಗಳಿಗೆ ತೊಂದರೆಯಾಗಿದೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಧುರೈ ಪೊಲೀಸರಿಗೆ ದೂರು ನೀಡಿದ್ದಾರೆ.
ಇದಲ್ಲದೆ ಚಿತ್ರದಲ್ಲಿ ಮೋದಿ ಅವರ ಜಿ.ಎಸ್.ಟಿ, ಡಿಜಿಟಲ್ ಇಂಡಿಯಾ ಯೋಜನೆಯನ್ನು ತಪ್ಪಾಗಿ ತೋರಿಸಲಾಗಿದೆ ಎಂದು ಬಿಜೆಪಿ ನಾಯಕರಾದ ರಾಜ, ತಮಿಳ್ ಇಸೈ ಸೌಂದರರಾಜನ್, ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಚಿತ್ರದ ವಿರುದ್ಧ ಕಿಡಿಕಾರಿದ್ದರು. ಜೊತೆಗೆ ಡಿ ವೈ ಎಫ್ ಐ ಸಂಘಟನೆ ಸದಸ್ಯರು ಪ್ರತಿಭಟನೆ ಕೂಡ ನಡೆಸಿದ್ದರು.
ಅಂದಹಾಗೆ, 'ಮೆರ್ಸಲ್' ಸಿನಿಮಾದಲ್ಲಿ ವಿಜಯ್, ಸಮಂತಾ, ನಿತ್ಯಾ ಮೆನನ್, ಕಾಜಲ್ ಅಗರವಾಲ್ ನಟಿಸಿದ್ದಾರೆ. ಅಕ್ಟೋಬರ್ 18ರಂದು ತೆರೆಗೆ ಬಂದಿದ್ದ ಈ ಚಿತ್ರ ಸದ್ಯ ನೂರು ಕೋಟಿ ಕಲೆಕ್ಷನ್ ಮಾಡಿದೆ.