Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ 'ಮೆರ್ಸಲ್' ಚಿತ್ರದ ವಿರುದ್ಧ ಮಧುರೈ ಪೊಲೀಸ್ ಠಾಣೆಗೆ ದೂರು!
ಒಂದಲ್ಲ ಒಂದು ಕಾರಣಕ್ಕೆ ದೊಡ್ಡ ಸುದ್ದಿ ಮಾಡುತ್ತಿರುವ ವಿಜಯ್ ನಟನೆಯ 'ಮೆರ್ಸಲ್' ಚಿತ್ರದ ವಿರುದ್ಧ ಈಗ ಮಧುರೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದಲ್ಲಿರುವ ಒಂದು ಸಂಭಾಷಣೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
'ನಮಗೆ ದೇಗುಲಗಳು ಬೇಕಾಗಿಲ್ಲ, ನಮಗೆ ಆಸ್ಪತ್ರೆಗಳು ಬೇಕು' ಎಂಬರ್ಥ ಬರುವ ಡೈಲಾಗ್ ಈಗ ವಿವಾದಕ್ಕೆ ಕಾರಣ ಆಗಿದೆ. ಈ ಸಂಭಾಷಣೆಯಿಂದ ಧಾರ್ಮಿಕ ಭಾವನೆಗಳಿಗೆ ತೊಂದರೆಯಾಗಿದೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಧುರೈ ಪೊಲೀಸರಿಗೆ ದೂರು ನೀಡಿದ್ದಾರೆ.
ಇದಲ್ಲದೆ ಚಿತ್ರದಲ್ಲಿ ಮೋದಿ ಅವರ ಜಿ.ಎಸ್.ಟಿ, ಡಿಜಿಟಲ್ ಇಂಡಿಯಾ ಯೋಜನೆಯನ್ನು ತಪ್ಪಾಗಿ ತೋರಿಸಲಾಗಿದೆ ಎಂದು ಬಿಜೆಪಿ ನಾಯಕರಾದ ರಾಜ, ತಮಿಳ್ ಇಸೈ ಸೌಂದರರಾಜನ್, ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಚಿತ್ರದ ವಿರುದ್ಧ ಕಿಡಿಕಾರಿದ್ದರು. ಜೊತೆಗೆ ಡಿ ವೈ ಎಫ್ ಐ ಸಂಘಟನೆ ಸದಸ್ಯರು ಪ್ರತಿಭಟನೆ ಕೂಡ ನಡೆಸಿದ್ದರು.
ಅಂದಹಾಗೆ, 'ಮೆರ್ಸಲ್' ಸಿನಿಮಾದಲ್ಲಿ ವಿಜಯ್, ಸಮಂತಾ, ನಿತ್ಯಾ ಮೆನನ್, ಕಾಜಲ್ ಅಗರವಾಲ್ ನಟಿಸಿದ್ದಾರೆ. ಅಕ್ಟೋಬರ್ 18ರಂದು ತೆರೆಗೆ ಬಂದಿದ್ದ ಈ ಚಿತ್ರ ಸದ್ಯ ನೂರು ಕೋಟಿ ಕಲೆಕ್ಷನ್ ಮಾಡಿದೆ.