Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ 'ಮೆರ್ಸಲ್' ಚಿತ್ರದ ವಿರುದ್ಧ ಮಧುರೈ ಪೊಲೀಸ್ ಠಾಣೆಗೆ ದೂರು!
ಒಂದಲ್ಲ ಒಂದು ಕಾರಣಕ್ಕೆ ದೊಡ್ಡ ಸುದ್ದಿ ಮಾಡುತ್ತಿರುವ ವಿಜಯ್ ನಟನೆಯ 'ಮೆರ್ಸಲ್' ಚಿತ್ರದ ವಿರುದ್ಧ ಈಗ ಮಧುರೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದಲ್ಲಿರುವ ಒಂದು ಸಂಭಾಷಣೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
'ನಮಗೆ ದೇಗುಲಗಳು ಬೇಕಾಗಿಲ್ಲ, ನಮಗೆ ಆಸ್ಪತ್ರೆಗಳು ಬೇಕು' ಎಂಬರ್ಥ ಬರುವ ಡೈಲಾಗ್ ಈಗ ವಿವಾದಕ್ಕೆ ಕಾರಣ ಆಗಿದೆ. ಈ ಸಂಭಾಷಣೆಯಿಂದ ಧಾರ್ಮಿಕ ಭಾವನೆಗಳಿಗೆ ತೊಂದರೆಯಾಗಿದೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಧುರೈ ಪೊಲೀಸರಿಗೆ ದೂರು ನೀಡಿದ್ದಾರೆ.
ಇದಲ್ಲದೆ ಚಿತ್ರದಲ್ಲಿ ಮೋದಿ ಅವರ ಜಿ.ಎಸ್.ಟಿ, ಡಿಜಿಟಲ್ ಇಂಡಿಯಾ ಯೋಜನೆಯನ್ನು ತಪ್ಪಾಗಿ ತೋರಿಸಲಾಗಿದೆ ಎಂದು ಬಿಜೆಪಿ ನಾಯಕರಾದ ರಾಜ, ತಮಿಳ್ ಇಸೈ ಸೌಂದರರಾಜನ್, ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಚಿತ್ರದ ವಿರುದ್ಧ ಕಿಡಿಕಾರಿದ್ದರು. ಜೊತೆಗೆ ಡಿ ವೈ ಎಫ್ ಐ ಸಂಘಟನೆ ಸದಸ್ಯರು ಪ್ರತಿಭಟನೆ ಕೂಡ ನಡೆಸಿದ್ದರು.
ಅಂದಹಾಗೆ, 'ಮೆರ್ಸಲ್' ಸಿನಿಮಾದಲ್ಲಿ ವಿಜಯ್, ಸಮಂತಾ, ನಿತ್ಯಾ ಮೆನನ್, ಕಾಜಲ್ ಅಗರವಾಲ್ ನಟಿಸಿದ್ದಾರೆ. ಅಕ್ಟೋಬರ್ 18ರಂದು ತೆರೆಗೆ ಬಂದಿದ್ದ ಈ ಚಿತ್ರ ಸದ್ಯ ನೂರು ಕೋಟಿ ಕಲೆಕ್ಷನ್ ಮಾಡಿದೆ.