Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಚಿತ್ರೀಕರಣ, ಪ್ರದರ್ಶನಕ್ಕೆ ಅನುಮತಿಗಾಗಿ ಮುಖ್ಯಮಂತ್ರಿಗೆ ನಿಯೋಗ ಮನವಿ
ಸುಮಾರು ಎರಡೂವರೆ ತಿಂಗಳಿನಿಂದ ಸಿನಿಮಾ ಚಿತ್ರೀಕರಣಗಳು ಸ್ಥಗಿತಗೊಂಡಿರುವುದರಿಂದ ಮತ್ತು ಪ್ರದರ್ಶನಗಳು ನಿಂತು ಹೋಗಿರುವುದರಿಂದ ಚಿತ್ರರಂಗ ಸಂಕಷ್ಟದಲ್ಲಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ನೇತೃತ್ವದ ಚಿತ್ರರಂಗದ ಸದಸ್ಯರ ನಿಯೋಗವು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಸಲ್ಲಿಸಿತು.
Recommended Video
ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಸಾರಾ ಗೋವಿಂದು, ನಿರ್ಮಾಪಕ ಕೆ. ಮಂಜು, ಕೆ.ವಿ. ಚಂದ್ರಶೇಖರ್ ಸೇರಿದಂತೆ ಹಲವರ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಅವರನ್ನು ಭೇಟಿ ಮಾಡಿತು.
ಜೂನ್ 1ರಿಂದ ಶಾಪಿಂಗ್ ಮಾಲ್, ಚಿತ್ರಮಂದಿರ ತೆರೆಯಲು ಅನುಮತಿ?
ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ ನೀಡುವಂತೆ, ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೆ ಅನುಮತಿ ಕೊಡುವಂತೆ ಹಾಗೂ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗಲು ಚಿತ್ರರಂಗಕ್ಕೆ ಅನುದಾನ ನೀಡುವಂತೆ ನಿಯೋಗ ಮನವಿ ಸಲ್ಲಿಸಿತು.
ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡುವ ಕುರಿತು ಭರವಸೆ ನೀಡಿದ್ದ ಮುಖ್ಯಮಂತ್ರಿ, ಚಿತ್ರೋದ್ಯಮಕ್ಕೆ ಅನುದಾನ ನೀಡುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದರು.
ಚಿತ್ರೀಕರಣ ಆರಂಭಿಸಲು ಅನುಮತಿ ನೀಡುವಂತೆ ಸಿಎಂ ಗೆ ಮನವಿ
ಜೂನ್ ಒಂದರಿಂದ ಎಲ್ಲಾ ರೀತಿಯ ಉದ್ಯಮ ಚಟುವಟಿಕೆಗಳು ಆರಂಭವಾಗುತ್ತಿವೆ. ಹೀಗಾಗಿ ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ನಿರ್ಧಾರ ಮಾಡುವುದಾಗಿ ಅವರು ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಮಾರ್ಗದರ್ಶಿಗಳಿಗೆ ಅನುಸಾರವಾಗಿಯೇ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.