Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಮುರಳಿ ಮನೆ ಮುಂದೆ ಅಭಿಮಾನಿ ಆತ್ಮಹತ್ಯೆ ಯತ್ನ
ಬೆಂಗಳೂರಿನ ನಾಗವಾರದಲ್ಲಿರುನ ನಟ ಶ್ರೀ ಮುರಳಿ ಮನೆ ಮುಂದೆ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಸುಂಕದಕಟ್ಟೆಯ ನಿವಾಸಿ 35 ವರ್ಷದ ಪವಿತ್ರಾ ಎಂದು ಗುರುತಿಸಲಾಗಿದೆ.
ಪವಿತ್ರಾ ಐಬಿಎಂ ಸಂಸ್ಥೆ ಉದ್ಯೋಗಿಯಾಗಿದ್ದು, ಕಂಪನಿಯಲ್ಲೇ ಮಾತ್ರೆ ಸೇವಿಸಿ ಬಂದು ಶ್ರೀಮುರಳಿ ಮನೆಮುಂದೆ ಬಂದಿದ್ದಳು ಎನ್ನಲಾಗಿದೆ. ನಿನ್ನೆ ಹಾಗೂ ಇಂದು ಬೆಳಗ್ಗೆ ಕೂಡಾ ಶ್ರೀಮುರಳಿಗೆ ಈ ಬಗ್ಗೆ ವಿಷಯ ತಿಳಿಸಿದ್ದಳು ಎನ್ನಲಾಗಿದೆ
ಈ
ಕುರಿತು
ಖಾಸಗಿ
ಸುದ್ದಿ
ವಾಹಿನಿಗಳೊಂದಿಗೆ
ಪ್ರತಿಕ್ರಿಯಿಸಿರುವ
ನಟ
ಶ್ರೀ
ಮರುಳಿ,
'ಆ
ಹುಡುಗಿ
ಯಾರೆಂಬುದೇ
ನನಗೆ
ಗೊತ್ತಿಲ್ಲ,
ಹಲವು
ದಿನಗಳಿಂದ
ನನಗೆ
ಮೆಸೇಜ್
ಮಾಡುತ್ತಿದ್ದಳು.
ನೀನು
ನನಗೆ
ಬೇಕು,
ನಿನ್ನನ್ನು
ಮದುವೆಯಾಗಬೇಕು,
ಎಂದೆಲ್ಲ
ಹೇಳುತ್ತಿದ್ದಳು.
ಆದರೆ,
ಇದೆಲ್ಲ
ಸರಿಯಲ್ಲ,
ನನಗೆ
ಮದುವೆಯಾಗಿದೆ
ಎಂದು
ಬುದ್ಧಿ
ಹೇಳಿದ್ದೆ.
ಆದರೆ, ಇಂದು ಬೆಳಗ್ಗೆ ಕರೆ ಮಾಡಿದ್ದ ಯುವತಿ, ನಿಮ್ಮ ಮನೆ ಮುಂದೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಇದ್ದಕ್ಕಿದ್ದಂತೆ ಮಾತ್ರೆ ಸೇವಿಸಿ ಮನೆಯ ಬಳಿಗೆ ಬಂದಿದ್ದಳು. ಕೂಡಲೇ ನಾನು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದೆ' ಎಂದು ತಿಳಿಸಿದ್ದಾರೆ.
ನನಗೆ ಈ ರೀತಿ ಸಾಕಷ್ಟು ಮೆಸೇಜ್ ಗಳು ಬರುತ್ತಿರುತ್ತದೆ. ಆದರೆ, ನಾನು ಯಾರನ್ನು ಹತ್ತಿರಕ್ಕೆ ಸೇರಿಸಿಲ್ಲ. ಆದಷ್ಟು ಬುದ್ಧಿವಾದ ಹೇಳುತ್ತೇನೆ ಎಂದು ಶ್ರೀಮುರಳಿ ಹೇಳಿದ್ದಾರೆ. ಯುವತಿ ಪವಿತ್ರಾಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ.ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
ನಿರ್ಮಾಪಕ ಚಿನ್ನೇಗೌಡ ಅವರ ಕಿರಿಯ ಪುತ್ರ ಶ್ರೀಮುರಳಿ ಅವರು ಸದ್ಯಕ್ಕೆ ಉಗ್ರಂ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಚಿತ್ರ 2014ರ ಫೆಬ್ರವರಿ ತಿಂಗಳಿನಲ್ಲಿ ತೆರೆ ಕಾಣುವ ಸಾಧ್ಯತೆಯಿದೆ.