'ಆ ದಿನಗಳು' ಚೇತನ್ ಜೊತೆ ಸಾಧುಕೋಕಿಲಾ ಮಗನ ಎಂಟ್ರಿ
ಸದ್ಯ 'ನೂರೊಂದು ನೆನಪು' ಚಿತ್ರದಲ್ಲಿ ನಟಿಸಿರುವ ಚೇತನ್, ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ಮಧ್ಯೆ ಸೈಲಾಂಟ್ ಆಗಿ ಮತ್ತೊಂದು ಹೊಸ ಚಿತ್ರವನ್ನ ಶುರು ಮಾಡಿದ್ದಾರೆ.
ಸದ್ಯ 'ನೂರೊಂದು ನೆನಪು' ಚಿತ್ರದಲ್ಲಿ ನಟಿಸಿರುವ ಚೇತನ್, ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ಮಧ್ಯೆ ಸೈಲಾಂಟ್ ಆಗಿ ಮತ್ತೊಂದು ಹೊಸ ಚಿತ್ರವನ್ನ ಶುರು ಮಾಡಿದ್ದಾರೆ.
ಹೌದು, ಸ್ಯಾಂಡಲ್ ವುಡ್ ನ ಸಕ್ಸಸ್ ಫುಲ್ ನಿರ್ದೇಶಕ ಮಹೇಶ್ ಬಾಬು ಜೊತೆ ಮುಂದಿನ ಸಿನಿಮಾ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು.

ಈಗ ಅಧೀಕೃತವಾಗಿ ಪಕ್ಕಾ ಆಗಿದ್ದು, ಇತ್ತೀಚೆಗೆ ಮೈಸೂರಿನ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಕ್ಲಾಪ್ ಮಾಡಿ, ಚಾಲನೆ ಕೊಟ್ಟಿದ್ದಾರೆ.[ಮಹೇಶ್ ಬಾಬು ಹೊಸ ಚಿತ್ರಕ್ಕೆ ಹೊಸ ಸಂಗೀತ ನಿರ್ದೇಶಕ, ಯಾರವರು?]

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಮಹೇಶ್ ಬಾಬು ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದು, ಲತಾ ಹೆಗಡೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಚೇತನ್ ಮತ್ತು ಲತಾ ಜೊತೆಗೆ ಅಚ್ಯುತ್ ಕುಮಾರ್, ಅವಿನಾಶ್, ಸುಧಾ ಬೆಳವಾಡಿ, ರವಿಶಂಕರ್ ಗೌಡ, ಸಾಧು ಕೋಕಿಲ, ಪ್ರಶಾಂತ್ ಸಿದ್ಧಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಚಿತ್ರದ ಮತ್ತೊಂದು ವಿಶೇಷ ಅಂದ್ರೆ, ಸಾಧು ಕೋಕಿಲ ಅವರ ಮಗ ಸುರಾಗ್ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಮೈಸೂರಿನ ಸುತ್ತಾಮುತ್ತಾ 40 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ.


Click it and Unblock the Notifications











