Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಜಿಎಫ್' ಟ್ರೈಲರ್ ನೋಡಿ ಉಪೇಂದ್ರ ಕಾಲೆಳೆದ ಅಭಿಮಾನಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾದ ಟ್ರೈಲರ್ ನೋಡಿ ಕನ್ನಡ ಚಿತ್ರರಂಗ ಪ್ರಶಂಸೆಗಳು ಸುರಿಮಳೆಗೈಯುತ್ತಿದೆ. ಕನ್ನಡದ ಸ್ಟಾರ್ ನಟರು, ಸುದೀಪ್, ಶ್ರೀಮುರಳಿ, ಶ್ರುತಿ ಹರಿಹರನ್, ಧನಂಜಯ್, ರಶ್ಮಿಕಾ ಮಂದಣ್ಣ ಸೇರಿದಂತೆ ಬಹುತೇಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಕೇವಲ ಕನ್ನಡ ಕಲಾವಿದರ ಮಾತ್ರವಲ್ಲದೇ, ಪರಭಾಷೆಯ ಸೆಲೆಬ್ರಿಟಿಗಳು ಕೂಡ ಕೆಜಿಎಫ್ ಟ್ರೈಲರ್ ಶಬ್ಬಾಶ್ ಎನ್ನುತ್ತಿದ್ದಾರೆ. ರಾಮ್ ಗೋಪಾಲ್ ವರ್ಮಾ, ರಾಶಿ ಖನ್ನಾ, ರಾಣಾ ದಗ್ಗುಬಾಟಿ, ವಿಶಾಲ್, ಹೀಗೆ ದೊಡ್ಡ ಬಳಗವೇ ಚಪ್ಪಾಳೆ ಹೊಡೆಯುತ್ತಿದೆ.
ಉಪೇಂದ್ರಗೆ 'ಹೀಗೆ ಮಾಡಬೇಡಿ' ಎಂದ '2.0' ನಿರ್ದೇಶಕ ಶಂಕರ್.!
ಹೀಗಿರುವಾಗ, ಇಲ್ಲೊಬ್ಬ ಅಭಿಮಾನಿ ಕೆಜಿಎಫ್ ಟ್ರೈಲರ್ ನೋಡಿ, ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಕಾಲೆಳೆದಿದ್ದಾನೆ. ಇದಕ್ಕೆ ಉಪ್ಪಿ ಕೂಡ ತಮ್ಮದೇ ಸ್ಟೈಲ್ ನಲ್ಲಿ ಆ ಅಭಿಮಾನಿ ಉತ್ತರ ನೀಡಿದ್ದಾರೆ. ಅಷ್ಟಕ್ಕೂ, ಕೆಜಿಎಫ್ ಟ್ರೈಲರ್ ಗೂ ಉಪ್ಪಿಗೂ ಏನ್ ಸಂಬಂಧ.? ಉಪ್ಪಿಗೆ ಆ ಅಭಿಮಾನಿ ಹೇಳಿದ್ದೇನು.? ರಿಯಲ್ ಸ್ಟಾರ್ ಕೊಟ್ಟ ರಿಯಾಕ್ಷನ್ ಏನು.? ಮುಂದೆ ಓದಿ......
ಉಪ್ಪಿಗೆ ಆ ಅಭಿಮಾನಿ ಕೇಳಿದ್ದೇನು.?
''ಸಿನಿಮಾ ಹೇಗೆ ಮಾಡಬೇಕು ಎಂದು ತೋರಿಸುವ ಮೂಲಕ ಇಡೀ ಭಾರತದ ಗಮನ ಸೆಳೆದಿರುವ ಪ್ರಶಾಂತ್ ನೀಲ್ ಮತ್ತು ತಂಡದಿಂದ ನೀವು ಏನಾದರು ಕಲಿತುಕೊಂಡ್ರಾ.? ನಿಮಗೆ ಇದೆಲ್ಲಾ ಬೇಡ ಬಿಡಿ. ಯಾಕಂದ್ರೆ, ನೀವು ಅಂದುಕೊಂಡಿದ್ದೀರಾ, ಇದೆಲ್ಲಾ ನಾನು ಆಗಲೇ ಮಾಡಿಬಿಟ್ಟಿದ್ದೀನಿ ಅಂತ. ಸತ್ಯ ಏನಪ್ಪಾ ಅಂದ್ರೆ, ಅಭಿಮಾನಿಗಳ ಬಗ್ಗೆ ಯೋಚನೆ ಮಾಡದೇ ನೀವು ಬರಿ ರೀಮೇಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದೀರಾ'' ಎಂದು ಕ್ಯಾಪ್ಟನ್ ಮೂವೀಸ್ ಎಂಬ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
2016ರ ಘಟನೆ ರಿಪೀಟ್: ಯಶ್-ಉಪ್ಪಿ ನಡುವೆ ಸ್ಪರ್ಧೆನಾ ಅಥವಾ ಸಂಧಾನ.?
ಉಪ್ಪಿ ಸ್ಟೈಲ್ ನಲ್ಲಿ ಉತ್ತರಿಸಿದ್ರು
''ನಾನು ನನಗೋಸ್ಕರ ಮಾಡಿದ್ರೆ ನಾನೊಬ್ಬ ಅತ್ಯುತ್ತಮ ನಟ, ನಿರ್ದೇಶಕ ಮತ್ತು ಸೂಪರ್ ಸ್ಟಾರ್ ಹಾಗೂ ಎಲ್ಲರಿಗಿಂತ ಉತ್ತಮ. ಆದ್ರೆ, ನಾನು ದುರಾದೃಷ್ಟವಶಾತ್ ನಾನು ಬೇರೆಯವರಿಗಾಗಿ(ನಿಮಗಾಗಿ)ಬದುಕ್ತಿದ್ದೀನಿ. (ಸದಾ ನಾನು ಯಾವಾಗಲೂ ಬೇರೆಯವರ ಸಾಧನೆ ಮತ್ತು ಖುಷಿಯನ್ನ ಎದುರು ನೋಡುತ್ತೇನೆ)ಅದಕ್ಕಾಗಿಯೇ ಪ್ರಜಾಕೀಯ'' ಎಂದು ಟಾಂಗ್ ಕೊಟ್ಟಿದ್ದಾರೆ.
ಹಿಸ್ಟರಿ ರಿಪೀಟ್ಸ್: ಅಂದು ರವಿಚಂದ್ರನ್, ಇಂದು ಯಶ್ 'ಕೆಜಿಎಫ್'
ಮತ್ತೆ ಕಿಡಿಕಾರಿದ ಅಭಿಮಾನಿ
ಉಪ್ಪಿಯ ಪ್ರತಿಕ್ರಿಯೆ ನೋಡಿ ಆ ಅಭಿಮಾನಿ ಮತ್ತೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. 'ಬಾಸ್ ಒಂದು ಮಾತು ಹೇಳಿ, ನೀವು ಯಾಕೆ ಆಕಸ್ಮಾತ್ ಪದ ಬಳಿಸಿದ್ದೀರಾ. ನಾವು ನಿಮ್ಮನ್ನ ರಾಜಕೀಯಕ್ಕೆ ಬರುವಂತೆ ಒತ್ತಾಯ ಮಾಡಿಲ್ಲ. ನಮ್ಮನ್ನ ಹೇಗೆ ಅಪರಾಧಿ ಮಾಡ್ತೀರಾ. ಇದು ನಿಮ್ಮ ಆಯ್ಕೆ ಆದ್ರೆ, ಆಕಸ್ಮಾತ್ ಪದ ಬಳಸುತ್ತಿದ್ದೀರಾ'' ಎಂದು ಪ್ರಶ್ನಿಸಿದ್ದಾರೆ.
ಹೊಸ ಡೈರೆಕ್ಟರ್ ಚಿತ್ರಕ್ಕೆ 'ಓಕೆ' ಎಂದ ಉಪೇಂದ್ರ.!
ಕೆಜಿಎಫ್ ಹೊಗಳಿದ ಉಪ್ಪಿ.!
ಹೀಗಂತ ಕೆಜಿಎಫ್ ಚಿತ್ರದ ಟ್ರೈಲರ್ ಬಗ್ಗೆ ಉಪ್ಪಿ ಮಾತನಾಡಿಲ್ಲ ಅಂತಲ್ಲ. ಯಶ್ ಚಿತ್ರಕ್ಕೆ ಉಪ್ಪಿ ಕೂಡ ಮೆಚ್ಚಿಕೊಂಡಿದ್ದಾರೆ. ''ಯಶ್ ಮತ್ತು ತಂಡಕ್ಕೆ ಒಳ್ಳೆಯದಾಗಲಿ. ಕೆಜಿಎಫ್ ಟ್ರೈಲರ್ ಅದ್ಭುತವಾಗಿದೆ. ಕನ್ನಡ ಇಂಡಸ್ಟ್ರಿಗೆ ಇದು ಹೆಮ್ಮೆ. ಈ ಸಿನಿಮಾ ನೋಡಲು ಕಾಯುತ್ತಿದ್ದೇವೆ'' ಎಂದು ಉಪೇಂದ್ರ ಶುಭಹಾರೈಸಿದ್ದಾರೆ.