Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುವರ್ಧನ್ ಕಟ್ ಔಟ್ ಗೆ ರಕ್ತದ ಅಭಿಷೇಕ ಮಾಡಿದ ಅಭಿಮಾನಿ!
Recommended Video
ನಟ ಡಾ.ವಿಷ್ಣುವರ್ಧನ್ ಅವರ 'ನಾಗರಹಾವು' ಸಿನಿಮಾ ಮತ್ತೆ ಜನರ ಮುಂದೆ ಬಂದಿದೆ. ಕಳೆದ ಶುಕ್ರವಾರ ಬಿಡುಗಡೆಯಾಗಿರುವ ಈ ಸಿನಿಮಾಗೆ ದೊಡ್ಡ ಪ್ರತಿಕ್ರಿಯೆ ಸಿಕ್ಕಿದೆ. ವಿಷ್ಣು ಅಭಿಮಾನಿಗಳಿಗಂತು ಇದು ಸಂಭ್ರಮದ ಸಮಯವಾಗಿದೆ.
'ನಾಗರಹಾವು' ಸಿನಿಮಾ ಮತ್ತೆ ರೀ ರಿಲೀಸ್ ಆದ ಖುಷಿಯನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಆದರೆ, ಮೈಸೂರಿನ ಒಬ್ಬ ಅಭಿಮಾನಿ ರಕ್ತದ ಅಭಿಷೇಕದ ಮೂಲಕ ತನ್ನ ಅಭಿಮಾನವನ್ನು ತೋರಿಸಿದ್ದಾನೆ.
ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ 'ನಾಗರಹಾವು' ಚಿತ್ರ ಪ್ರದರ್ಶನ ಆಗುತ್ತಿತ್ತು. ಈ ವೇಳೆ ಚಿತ್ರಮಂದಿರದ ಮುಂದೆ ನಿಲ್ಲಿಸಿದ್ದ ರಾಮಾಚಾರಿ ಕಟ್ ಔಟ್ ಮೇಲೆ ಹತ್ತಿದ ಅಭಿಮಾನಿ ರಕ್ತದ ಅಭಿಷೇಕ ಮಾಡಿ ಅಚ್ಚರಿ ಮೂಡಿಸಿದ್ದಾನೆ.
ಅಭಿಮಾನಿಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ನೊಡಿದ ಅನೇಕರು ವಿಷ್ಟು ಶಾಂತಿ ಪ್ರಿಯರು, ಅಲ್ಲದೆ ಈ ರೀತಿ ಯಾರೆ ಮಾಡಿದರು ಅದು ತಪ್ಪು ಎಂದು ಆತನಿಗೆ ಹೇಳಿದ್ದಾರೆ.
ಅಂದಹಾಗೆ, ಹೊಸ ತಂತ್ರಜ್ಞಾನದೊಂದಿಗೆ 'ನಾಗರಹಾವು' ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಜ್ಯದ ನೂರಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ ಸಿನಿಮಾ 75 ಲಕ್ಷದಿಂದ 1 ಕೋಟಿ ಕಲೆಕ್ಷನ್ ಮಾಡಿದೆಯಂತೆ.