'ಬಿಗ್ ಬಾಸ್' ವಿರುದ್ಧ ದೂರು ದಾಖಲಿಸಲು ಮುಂದಾದ ಕಾಮನ್ ಮ್ಯಾನ್.!
Recommended Video

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಬಿಗ್ ಬಾಸ್' ಕನ್ನಡ ರಿಯಾಲಿಟಿ ಶೋ ವಿರುದ್ಧ ಮೈಸೂರು ಮೂಲದ ವ್ಯಕ್ತಿಯೋರ್ವ ದೂರು ನೀಡಲು ಮುಂದಾಗಿದ್ದಾರೆ.
ಬಿಗ್ ಬಾಸ್ ನಲ್ಲಿ ಸಾಮಾನ್ಯರಿಗೆ ಅವಕಾಶ ನೀಡಲಾಗುವುದೆಂದು ಘೋಷಿಸಿತ್ತು. ಆದ್ರೆ, ನನಗೆ ಅವಕಾಶ ನೀಡದೆ ನನಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಟೈಲರ್ ಭಯಾನಕ ನಾಗರಾಜ ಉರುಫ್ ನಾಗರಾಜ್ ದೂರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಪ್ರಸ್ತುತ ನಡೆಯುತ್ತಿರುವ ಬಿಗ್ ಬಾಸ್ 5ನೇ ಆವೃತ್ತಿಯಲ್ಲಿ ಜನಸಾಮಾನ್ಯರಿಗೆ ಅವಕಾಶ ನೀಡಲಾಗುತ್ತೆ ಎಂದು ಘೋಷಿಸಿದ್ದರು. ಅನ್ ಲೈನ್ ಮುಖಾಂತರ 40 ಸಾವಿರ ಅಧಿಕ ಅರ್ಜಿಗಳು ಬಂದಿದ್ದು, ಇದರಂತೆ ನಾನು ಅರ್ಜಿ ಹಾಕಿದ್ದೆ. ಅರ್ಜಿ ಅಂಗೀಕೃತವಾಗಿ ರಸೀದಿಯು ಬಂದಿತ್ತು. ಕಾರ್ಯಕ್ರಮ ಆರಂಭವಾಗುವವರೆಗೆ ಕಾದಿದ್ದೆ. ಆದರೆ, ಯಾವುದೇ ಸೂಚನೆ ನೀಡದೆ ಇದ್ದರಿಂದ ನನ್ನ ಸಮಯ ವ್ಯರ್ಥವಾಗಿದೆ. ಈ ಬಗ್ಗೆ ನ್ಯಾಯಾಂಗ ಹೋರಾಟ ಮಾಡಲಾಗುವುದು'' ಎಂದು ಆರೋಪಿಸಿದರು.

ಟೈಲರ್ ವೃತ್ತಿ ನಿರ್ವಹಿಸುತ್ತಿರುವ ನಾನು ಒಬ್ಬ ಸಾಮಾನ್ಯ, ನನ್ನ ಸ್ವವಿವರ ಹಾಗೂ ಇತರರಿಗಿಂತ ಭಿನ್ನವೆಂದು ವಿಡಿಯೋವನ್ನು ಅಪ್ ಲೋಡ್ ಮಾಡಿದ್ದೆ. ಈಗ ಸ್ಪರ್ಧೆಯಲ್ಲಿ ಭಾಗಿಯಾಗಿರುವ ಸಾಮಾನ್ಯರು ಹೇಗೆ ಭಿನ್ನವೆಂದು ಎಲ್ಲಿಯೂ ಸ್ಪಷ್ಟನೆ ನೀಡಿಲ್ಲ. ಪ್ರಯೋಜಕರು ಪೂರ್ವ ನಿರ್ಣಯದಂತೆ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಕೇವಲ ಟಿ.ಆರ್.ಪಿಗಾಗಿ ಸಾಮಾನ್ಯರಿಗೆ ಅವಕಾಶ ನೀಡಲಾಗುವುದು ಎಂದು ಸುಳ್ಳು ಪ್ರಕಟಣೆ ನೀಡಿದ್ದು ಅಕ್ಷಮ್ಯವೆಂದು ಕಿಡಿಕಾರಿದ್ದಾರೆ.

ಕೊನೆ ಪಕ್ಷ ಸೈನಿಕರ ಮಕ್ಕಳಿಗಾದರೂ ಅವಕಾಶ ನೀಡಿದ್ದರೆ ಅವರ ಕುಟುಂಬಗಳಿಗೆ ಸಹಾಯವಾಗುತ್ತಿತ್ತು, ಪೂರ್ವ ನಿಯೋಜಿತ ಕಾರ್ಯಕ್ರಮದಂತೆ ನಡೆಯುತ್ತಿರುವ ಬಿಗ್ ಬಾಸ್ ನಿಲ್ಲಬೇಕೆಂದು ಇಲ್ಲವೇ ವಾಹಿನಿ ವಿರುದ್ಧ ನ್ಯಾಯಾಂಗ ಹೋರಾಟ ನಡೆಸುವುದಾಗಿ ಹೇಳಿಕೊಂಡಿದ್ದಾರೆ.


Click it and Unblock the Notifications











