Don't Miss!
- News Rain: ಬರದಿಂದ ತತ್ತರಿಸಿದ ಮಲೆನಾಡು: ಕೊಪ್ಪ ಮೇರುತಿ ಶಿಖರದಲ್ಲಿ ವರುಣನಿಗೆ ಹೋಮ-ಹವನ
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ವಿನೋದ್ ರಾಜ್ ಬಳಿ 1 ಲಕ್ಷ ಕದ್ದಿದ್ದ ಕಳ್ಳನ ಬಂಧನ
ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ನಟ ವಿನೋದ್ ರಾಜ್ ಅವರನ್ನ ಯಾಮಾರಿಸಿ ಒಂದು ಲಕ್ಷ ಕಳ್ಳತನ ಮಾಡಿದ್ದ ಖದೀಮನನ್ನ ಕೊನೆಗೂ ನೆಲಮಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಇಂಡಸ್ ಇಂಡ್ ಬ್ಯಾಂಕ್ ಎದುರುಗಡೆ ನಟ ವಿನೋದ್ ರಾಜ್ ಅವರ ಕಾರು ಪಂಚರ್ ಮಾಡಿ, ಅಭಿಮಾನಿ ಎಂದು ಹೇಳಿಕೊಂಡು ಬಂದು ಅವರ ಗಮನವನ್ನ ಬೇರೆಡೆ ಸೆಳೆದು, ಕಾರಿನಲ್ಲಿದ್ದ ಒಂದು ಲಕ್ಷ ಎಗರಿಸಿ ಪರಾರಿಯಾಗಿದ್ದ ರಾಜು ಅಲಿಯಾಸ್ ಹೈಟೆಕ್ ರಾಜನನ್ನು ಪೊಲೀಸರು ಸೆರೆಹಿಡಿದ್ದಾರೆ.
ವಿನೋದ್ ರಾಜ್ ಬಳಿ 1 ಲಕ್ಷ ಹಣ ಕದ್ದು ಪರಾರಿಯಾದ ಕಳ್ಳರು
ಬಂಧಿತ ರಾಜು, ಐಷರಾಮಿ ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಈಗ ವಿಚಾರಣೆಗೆ ಒಳಪಡಿಸಲಾಗಿದ್ದು, ಆತನನ ಗ್ಯಾಂಗ್ ನ್ನ ಪತ್ತೆ ಹಚ್ಚುತ್ತಿದ್ದಾರೆ. ನೆಲಮಂಗಲ ಸಿಪಿಐ ಅನಿಲ್ ಕುಮಾರ್ ನೇತೃತ್ವದ ತಂಡ ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದೆ.
ಅಂದು ಈ ಘಟನೆ ನಡೆದಾಗ ವಿನೋದ್ ರಾಜ್ ಜೊತೆ ರಾಮಾನುಜ ಎಂಬುವರು ಇದ್ದರು. ಕಾರು ಪಂಚರ್ ಆದಮೇಲೆ ಮತ್ತೊಬ್ಬರನ್ನ ಫೋನ್ ಮಾಡಿ ಕರೆಸಿಕೊಂಡಿದ್ದರು. ಈ ವೇಳೆ ಟೈರ್ ಬದಲಾಯಿಸಲು ಮೂವರು ವಾಹನದಿಂದ ಕೆಳಗೆ ಇಳಿದಾಗ, ಕಳ್ಳರು ಈ ಕೃತ್ಯವೆಸಗಿದ್ದರು.