Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ನೃತ್ಯಕ್ಕೆ ಮನಸೋತಿತ್ತು ನಂದಿಬೆಟ್ಟದ ಆ ಹನುಮ
ಏಪ್ರಿಲ್ 12 ಡಾ.ರಾಜ್ ಕುಮಾರ್ ಅವರ ಪುಣ್ಯತಿಥಿ. ರಾಜ್ ಅವರ ಆತ್ಮೀಯರೂ ಆದ ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಅವರು ವರನಟನೊಂದಿಗಿನ ಒಂದು ತಮಾಷೆ ಪ್ರಸಂಗವನ್ನು ಸ್ಮರಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಸಮೀಪದ ನಂದಿಬೆಟ್ಟದಲ್ಲಿ ರಾಜಕುಮಾರ್ ಅಭಿನಯದ 'ಭೂಪತಿ ರಂಗ' ಸಿನಿಮಾ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ರಾಜ್ - ಉದಯ ಚಂದ್ರಿಕಾ ಜೋಡಿ 'ಓಹೋ ಮುದ್ದಿನ ಮಲ್ಲಿಗೆ..' ಯುಗಳ ಗೀತೆಗೆ ಹೆಜ್ಜೆ ಹಾಕುತ್ತಿದ್ದರು.
ಡಾ ರಾಜ್ ಗೆ ಕಲರ್ ಶರ್ಟ್ ಹಾಕಿಸಿದ ಅಪರೂಪದ ಕಥೆ
ಶೂಟಿಂಗ್ ಬಿಡುವಿನ ವೇಳೆ ನಾನು ಅವರ ಕೆಲವು ಫೋಟೋಗಳನ್ನು ತೆಗೆದುಕೊಂಡೆ. ಸಂಜೆಯ ವೇಳೆಯಲ್ಲೊಂದು ತಮಾಷೆ ನಡೆಯಿತು. ಆಗ ನಂದಿ ಬೆಟ್ಟದಲ್ಲಿ ಕೋತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ರಾಜ್, ಮುಂದಿನ ಶಾಟ್ ಗೆಂದು ಕ್ಯಾಮರಾ ಎದುರು ಬರುತ್ತಿದ್ದಂತೆ ಕೋತಿಯೊಂದು ಅವರ ಬಳಿ ಓಡಿಬಂತು.
ಡಾ.ರಾಜ್ ಅಸುನೀಗಿದ ದಿನ ಏನಾಗಿತ್ತು : ಅಭಿಮಾನಿ ಕಂಡಂತೆ
ಚಿತ್ರತಂಡದ ಹುಡುಗರು ಓಡಿಸಿದರೂ ಅದು ಹೋಗಲೊಲ್ಲದು. ತಮ್ಮ ಕಾಲ ಬಳಿಯೇ ಸುಳಿದಾಡುತ್ತಿದ್ದ ಕೋತಿಯನ್ನು ರಾಜ್ ಪ್ರೀತಿಯಿಂದ ಮಾತನಾಡಿಸತೊಡಗಿದರು. ಕ್ಯಾಮರಾಮನ್ ಪಿ.ಎಸ್.ಪ್ರಕಾಶ್ ತಮ್ಮ ಕ್ಯಾಮರಾ ಆಫ್ ಮಾಡಿ ನಗುತ್ತಾ ಕುಳಿತರು. ನಾನು ಕ್ಯಾಮರಾ ಎತ್ತಿಕೊಂಡು ಅಲ್ಲಿಗೆ ಓಡಿದೆ. ಕೋತಿ ಎದುರು ರಾಜ್ ನೃತ್ಯದ ಬಂಗಿಯಲ್ಲಿ ಕೊಟ್ಟ ಪೋಸುಗಳನ್ನು ಕ್ಲಿಕ್ಕಿಸಿಕೊಂಡೆ.