Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈನ ಬಿಗ್ ಬಾಸ್ ಮನೆಯಲ್ಲಿ ದುರಂತ: ಓರ್ವ ವ್ಯಕ್ತಿ ಸಾವು
ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿರುವ ತಮಿಳು ಬಿಗ್ ಬಾಸ್ ಈಗ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಬಿಗ್ ಬಾಸ್ ಮನೆಯಲ್ಲಿ ದುರಂತವೊಂದು ಸಂಭವಿಸಿದ್ದು, ಎಸಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಸಾವಿಗೀಡಾದ ವ್ಯಕ್ತಿಯ ಹೆಸರು ಗುಣಶೇಖರ್ ಎಂದು ಗುರುತಿಸಲಾಗಿದ್ದು, ಅರಿಯೂಲುರು ಗ್ರಾಮದವರು ಎಂಬ ಮಾಹಿತಿ ಸಿಕ್ಕಿದೆ. ಶನಿವಾರ ಈ ಘಟನೆ ನಡೆದಿದ್ದು, ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯವಾಗಿದ್ದ. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
'ಬಿಗ್ ಬಾಸ್' ಪ್ರೇಮಿಗಳ ಬಗ್ಗೆ ಹೀಗೊಂದು ಸುಳ್ಳು ಸುದ್ದಿ, ಸುಳ್ಳು ಸಾಕ್ಷಿ.!
ಚೆನ್ನೈನ ಚೆಂಬರಾಂಬಕ್ಕಮ್ ನಲ್ಲಿರುವ ಇವಿಪಿ ಫಿಲ್ಮಿ ಸಿಟಿಯಲ್ಲಿ ಬಿಗ್ ಬಾಸ್ ಶೋ ರೆಕಾರ್ಡಿಂಗ್ ನಡೆಯುತ್ತಿದೆ. ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಪ್ರಕರಣ ದಾಖಲಿಸಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
'ಬಿಗ್ ಬಾಸ್' ಮನೆಯೊಳಗೆ ಈ 'ಕಾಮಿಡಿ ಕ್ವೀನ್' ಹೋಗೋದು ಪಕ್ಕಾ.!
ಎಸಿ ಸಮಸ್ಯೆಯಾಗಿದ್ದರಿಂದ ಗುಣಶೇಖರ್ ಅವರು ಎರಡನೆ ಮಹಡಿಗೆ ಹೋಗಿ ಕೆಲಸದಲ್ಲಿ ತೊಡಗಿದ್ದರು. ಆದ್ರೆ, ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ.
'ಬಿಗ್ ಬಾಸ್' ಪ್ರಸಾರ ಸಮಯ ಬದಲಾಗುತ್ತಿದೆ.!
ಇನ್ನು ಕಳೆದ ವರ್ಷವೂ ತಮಿಳು ಬಿಗ್ ಬಾಸ್ ನಲ್ಲಿ ದುರಂತವೊಂದು ನಡೆದಿತ್ತು. ಮುಂಬೈ ಮೂಲದ ಫ್ಲಂಬರ್ (plumber) ಹೀಗೆ ಬಿಗ್ ಬಾಸ್ ಸೆಟ್ ನಲ್ಲಿ ಸಾವಿಗೀಡಾಗಿದ್ದರು.