Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜ್ವಾಲೆಯಂತೆ ಉರಿಯುತ್ತಿದೆ 'ಆ ಕರಾಳ ರಾತ್ರಿ' ಟ್ರೇಲರ್
'ಆ ಕರಾಳ ರಾತ್ರಿ' ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಅನೇಕ ವಿಚಾರಗಳಗೆ ಸುದ್ದಿ ಮಾಡಿದೆ. ಇದೀಗ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಒಳ್ಳೆಯ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ನೋಡುಗರಿಗೆ ಕುತೂಹಲವನ್ನು ಹುಟ್ಟಿಸುವಲ್ಲಿ ಟ್ರೇಲರ್ ಯಶಸ್ವಿಯಾಗಿದೆ.
'ಆ ಕರಾಳ ರಾತ್ರಿ' ಚಿತ್ರ ಸಾಹಿತಿ ಮೋಹನ್ ಹಬ್ಬು ಅವರ 'ಕರಾಳ ರಾತ್ರಿ' ನಾಟಕ ಆಧಾರಿತ ಸಿನಿಮಾವಾಗಿದೆ. ಸಿನಿಮಾ ಕ್ರೈಂ ಥ್ರಿಲ್ಲರ್ ಜೊತೆಗೆ ಎಮೋಷನಲ್ ಆಗಿರಲಿದ್ದು, ಯಾವುದೇ ಹಾರರ್ ಅಂಶಗಳು ಚಿತ್ರದಲ್ಲಿ ಇಲ್ಲವಂತೆ. ವಿಶೇಷ ಅಂದರೆ, ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ಜೆಕೆ ಮತ್ತು ಅನುಪಮ ಜೋಡಿಯಾಗಿದ್ದಾರೆ. ಒಂದು ಪಾತ್ರದಲ್ಲಿ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸ್ ಕಾಣಿಸಿಕೊಂಡಿದ್ದಾರೆ.
'ಆ ಕರಾಳ ರಾತ್ರಿ' ಹಾಡುಗಳನ್ನು ಲಾಂಚ್ ಮಾಡಿದ ಉಪೇಂದ್ರ
ರಾಷ್ಟ್ರ ಪ್ರಶಸ್ತಿ ಪಡೆದ 'ಅರಿವು' ಸಿನಿಮಾವನ್ನು ನಿರ್ಮಾಣ ಮಾಡಿದ್ದ ಅವಿನಾಶ್ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಗಣೇಶ್ ನಾರಾಯಣ್ ಸಂಗೀತ ನೀಡಿದ್ದಾರೆ. ರಂಗಾಯಣ ರಘು ಹಾಗೂ ವೀಣಾಸುಂದರ್ 'ಆ ಕರಾಳ ರಾತ್ರಿ'ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ದಯಾಳ್ ಅವರ 'ಹಗ್ಗದ ಕೊನೆ' ಸಿನಿಮಾದಲ್ಲಿ ನಟಿಸಿದ್ದ ನಟ ನವೀನ್ ಕೃಷ್ಣ ಇಲ್ಲಿ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಜೊತೆಗೆ ಒಂದು ಪಾತ್ರವನ್ನು ಕೂಡ ನಿರ್ವಹಿಸಲಿದ್ದಾರೆ. 1980ರ ಕಾಲಮಾನದಲ್ಲಿ ಚಿತ್ರದ ಕಥೆ ಸಾಗುತ್ತದೆ. ಅಂದಹಾಗೆ, ಈ ಸಿನಿಮಾ ಮುಂದಿನ ಶುಕ್ರವಾರ (ಜುಲೈ11) ರಂದು ಬಿಡುಗಡೆಯಾಗಲಿದೆ.