Just In
Don't Miss!
- News
ಯಲ್ಲಾಪುರ ಭೂಕುಸಿತ: ಯುವತಿಯ ಮದುವೆ ಕನಸು "ಮಣ್ಣು'ಪಾಲು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Automobiles
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ ಈಗ ಕನ್ನಡ ಚಿತ್ರ ನಿರ್ಮಾಪಕ
ಒಂದು ಸಿನಿಮಾ ನಿರ್ಮಾಣ ಮಾಡುವುದು ಎಂದರೆ ಅಷ್ಟು ಸುಲಭದ ಮಾತಲ್ಲ. ಆದರೆ ಇಂತಹ ಸಾಹಸವನ್ನು ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ ಒಬ್ಬರು ಮಾಡಿದ್ದಾರೆ. ಮೂಲತಃ ಕೃಷಿಕರಾಗಿದ್ದ ರವೀಂದ್ರ ಗೌಡ ಪಾಟೀಲ್ 'ಆ ಒಂದು ದಿನ' ಎಂಬ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.
ದೇಶಕ್ಕೆ ಏನಾದರೂ ಮಾಡಬೇಕು ಎಂಬ ಆಸೆ ಹೊಂದಿದ್ದ ಇವರು ಒಂದು ಸಿನಿಮಾ ಮಾಡಿ ಅದರ ಮೂಲಕ ಒಂದು ಒಳ್ಳೆಯ ಸಂದೇಶವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ಇಂದಿನ ರಾಜಕೀಯ ವ್ಯವಸ್ಥೆ ಹಾಳಾಗಿದೆ, ಪ್ರಜಾಪ್ರಭುತ್ವವನ್ನು ಪ್ರಜೆಗಳೆ ಸರಿ ಮಾಡಬೇಕು ಎನ್ನುವ ಇವರು ತಮ್ಮ 'ಆ ಒಂದು ದಿನ' ಸಿನಿಮಾ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ.
ದೇಶದ ಅಭಿವೃದ್ಧಿಗೆ ಬದಲಾವಣೆ ಮುಖ್ಯ ಎನ್ನುವ ಕಾರಣದಿಂದ ಈ ಚಿತ್ರವನ್ನು ಅವರು ಮಾಡಿದ್ದಾರೆ. 'ಆ ಒಂದು ದಿನ' ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಶೇಷ ಅಂದರೆ ಈ ಚಿತ್ರದಲ್ಲಿ ನಟಿಸಿರುವ ಎಲ್ಲ ಕಲಾವಿದರು ಕೂಡ ಹೊಸಬರೇ. ಹಳ್ಳಿಯಲ್ಲಿ ಸಿನಿಮಾದ ಚಿತ್ರೀಕರಣ ಮಾಡಿದ್ದು, ಆ ಹಳ್ಳಿಯ ಜನರೇ ಚಿತ್ರದಲ್ಲಿ ನಟಿಸಿದ್ದಾರೆ. ಸಿಮ್ರಾನ್ ಚಿತ್ರದ ನಾಯಕಿ ಆಗಿದ್ದಾರೆ. ಧಾರವಾಡದ ಹುಡುಗಿ ಆಗಿರುವ ಸಿಮ್ರಾನ್ ಮುಂಬೈನಲ್ಲಿ ನೆಲೆಸಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾ.
ಶ್ರೀ ಹರ್ಷಎಂಬುವವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾದ ಒಂದು ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದು, ಆ ಹಾಡು ಅದ್ಬುತವಾಗಿದೆ. ಸಂಜಯ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.