Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ ಈಗ ಕನ್ನಡ ಚಿತ್ರ ನಿರ್ಮಾಪಕ
ಒಂದು ಸಿನಿಮಾ ನಿರ್ಮಾಣ ಮಾಡುವುದು ಎಂದರೆ ಅಷ್ಟು ಸುಲಭದ ಮಾತಲ್ಲ. ಆದರೆ ಇಂತಹ ಸಾಹಸವನ್ನು ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ ಒಬ್ಬರು ಮಾಡಿದ್ದಾರೆ. ಮೂಲತಃ ಕೃಷಿಕರಾಗಿದ್ದ ರವೀಂದ್ರ ಗೌಡ ಪಾಟೀಲ್ 'ಆ ಒಂದು ದಿನ' ಎಂಬ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.
ದೇಶಕ್ಕೆ ಏನಾದರೂ ಮಾಡಬೇಕು ಎಂಬ ಆಸೆ ಹೊಂದಿದ್ದ ಇವರು ಒಂದು ಸಿನಿಮಾ ಮಾಡಿ ಅದರ ಮೂಲಕ ಒಂದು ಒಳ್ಳೆಯ ಸಂದೇಶವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ಇಂದಿನ ರಾಜಕೀಯ ವ್ಯವಸ್ಥೆ ಹಾಳಾಗಿದೆ, ಪ್ರಜಾಪ್ರಭುತ್ವವನ್ನು ಪ್ರಜೆಗಳೆ ಸರಿ ಮಾಡಬೇಕು ಎನ್ನುವ ಇವರು ತಮ್ಮ 'ಆ ಒಂದು ದಿನ' ಸಿನಿಮಾ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ.
ದೇಶದ ಅಭಿವೃದ್ಧಿಗೆ ಬದಲಾವಣೆ ಮುಖ್ಯ ಎನ್ನುವ ಕಾರಣದಿಂದ ಈ ಚಿತ್ರವನ್ನು ಅವರು ಮಾಡಿದ್ದಾರೆ. 'ಆ ಒಂದು ದಿನ' ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಶೇಷ ಅಂದರೆ ಈ ಚಿತ್ರದಲ್ಲಿ ನಟಿಸಿರುವ ಎಲ್ಲ ಕಲಾವಿದರು ಕೂಡ ಹೊಸಬರೇ. ಹಳ್ಳಿಯಲ್ಲಿ ಸಿನಿಮಾದ ಚಿತ್ರೀಕರಣ ಮಾಡಿದ್ದು, ಆ ಹಳ್ಳಿಯ ಜನರೇ ಚಿತ್ರದಲ್ಲಿ ನಟಿಸಿದ್ದಾರೆ. ಸಿಮ್ರಾನ್ ಚಿತ್ರದ ನಾಯಕಿ ಆಗಿದ್ದಾರೆ. ಧಾರವಾಡದ ಹುಡುಗಿ ಆಗಿರುವ ಸಿಮ್ರಾನ್ ಮುಂಬೈನಲ್ಲಿ ನೆಲೆಸಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾ.
ಶ್ರೀ ಹರ್ಷಎಂಬುವವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾದ ಒಂದು ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದು, ಆ ಹಾಡು ಅದ್ಬುತವಾಗಿದೆ. ಸಂಜಯ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.