Just In
Don't Miss!
- Automobiles
ಆಕ್ಸೆಸ್ 125 ಸ್ಕೂಟರ್ ಬೆಲೆಯನ್ನು ಹೆಚ್ಚಿಸಿದ ಸುಜುಕಿ ಮೋಟಾರ್ಸೈಕಲ್
- News
ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್!
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮತ್ತೆ ದೆವ್ವದ ಬೆನ್ನತ್ತಿ ಹೋದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್
ಸಸ್ಪೆನ್ಸ್, ಥ್ರಿಲ್ಲರ್, ಹಾರರ್ ಚಿತ್ರಗಳಿಗೆ ಖ್ಯಾತಿ ಹೊಂದಿರುವ ನಿರ್ದೇಶಕ ಪಿ ವಾಸು 'ಆಯುಷ್ಮಾನ್ ಭವ' ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬರ್ತಿದ್ದಾರೆ. 2016ರಲ್ಲಿ ಶಿವರಾಜ್ ಕುಮಾರ್ ಜೊತೆ 'ಶಿವಲಿಂಗ' ಮಾಡಿದ್ದ ಪಿ ವಾಸು, ಈಗ 'ಆಯುಷ್ಮಾನ್ ಭವ' ಮೂಲಕ ಮತ್ತೆ ಪ್ರೇಕ್ಷಕರನ್ನ ರಂಜಿಸಲು ಬರುತ್ತಿದ್ದಾರೆ.
ಎಲ್ಲರ ನಿರೀಕ್ಷೆಯಂತೆ 'ಆಯುಷ್ಮಾನ್ ಭವ' ಚಿತ್ರದಲ್ಲೂ ಹಾರರ್ ಟಚ್ ಇರೋದು ಪಕ್ಕಾ ಆಗಿದೆ. ಸದ್ಯ ಆಯುಷ್ಮಾನ್ ಭವ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳಲ್ಲಿ ಥ್ರಿಲ್ ಹೆಚ್ಚಿಸಿದೆ.
ಕಾರು ನಿಲ್ಲಿಸಿ ತಾತನಿಗೆ ಹಣ ಕೊಟ್ಟ ಸ್ಯಾಂಡಲ್ ವುಡ್ ಸ್ಟಾರ್
ಸಿನಿಮಾದಲ್ಲಿ ದೆವ್ವ ಇದೆ ಎನ್ನುವುದರ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಆದರೆ, ಯಾರ ದೇಹದ ಮೇಲೆ ದೆವ್ವ ಬರುತ್ತೆ, ಯಾರು ದೆವ್ವ ಎಂಬುದು ಗೌಪ್ಯವಾಗಿದೆ. ಶಿವಲಿಂಗ ಸಿನಿಮಾದ ಬಳಿಕ ಮತ್ತೆ ಶಿವರಾಜ್ ಕುಮಾರ್ ಅವರು ದೆವ್ವದ ಬೆನ್ನತ್ತಿ ಹೋಗಿರುವುದು ಅಭಿಮಾನಿಗಳಲ್ಲಿ ಕೌತುಕ ಹೆಚ್ಚಿಸಿದೆ.
ಶಿವರಾಜ್ ಕುಮಾರ್ ನಾಯಕನಾಗಿ ನಟಿಸಿದ್ದು, ರಚಿತಾ ರಾಮ್ ನಾಯಕಿಯಾಗಿದ್ದಾರೆ. ಶಿವಾಜಿ ಪ್ರಭು, ಸುಹಾಸಿನಿ ಮಣಿರತ್ನಂ, ಸಾಧುಕೋಕಿಲಾ, ರಂಗಾಯಣ ರಘು ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.
'ದಾದಾಸಾಹೇಬ್ ಫಾಲ್ಕೆ' ಅಮಿತಾಬ್ ಬಚ್ಚನ್ ಭೇಟಿಯಾದ ಶಿವರಾಜ್ ಕುಮಾರ್
ಕನ್ನಡದ ಆಪ್ತಮಿತ್ರ, ತಮಿಳಿನಲ್ಲಿ ಚಂದ್ರಮುಖಿ, ತೆಲುಗಿನಲ್ಲಿ ನಾಗವಲ್ಲಿ, ದೃಶ್ಯ, ಶಿವಲಿಂಗ, ಆರಕ್ಷಕ ಅಂತಹ ಥ್ರಿಲ್ಲಿಂಗ್ ಹಾಗೂ ಹಾರರ್ ಚಿತ್ರಗಳನ್ನ ನಿರ್ದೇಶನ ಮಾಡಿದ ಖ್ಯಾತಿ ಹೊಂದಿದ್ದಾರೆ ಪಿ ವಾಸು. ಇನ್ನುಳಿದಂತೆ ದ್ವಾರಕೀಶ್ ನಿರ್ಮಾಣದ ಈ ಚಿತ್ರ ಈಗಾಗಲೇ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.