Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ದೆವ್ವದ ಬೆನ್ನತ್ತಿ ಹೋದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್
ಸಸ್ಪೆನ್ಸ್, ಥ್ರಿಲ್ಲರ್, ಹಾರರ್ ಚಿತ್ರಗಳಿಗೆ ಖ್ಯಾತಿ ಹೊಂದಿರುವ ನಿರ್ದೇಶಕ ಪಿ ವಾಸು 'ಆಯುಷ್ಮಾನ್ ಭವ' ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬರ್ತಿದ್ದಾರೆ. 2016ರಲ್ಲಿ ಶಿವರಾಜ್ ಕುಮಾರ್ ಜೊತೆ 'ಶಿವಲಿಂಗ' ಮಾಡಿದ್ದ ಪಿ ವಾಸು, ಈಗ 'ಆಯುಷ್ಮಾನ್ ಭವ' ಮೂಲಕ ಮತ್ತೆ ಪ್ರೇಕ್ಷಕರನ್ನ ರಂಜಿಸಲು ಬರುತ್ತಿದ್ದಾರೆ.
ಎಲ್ಲರ ನಿರೀಕ್ಷೆಯಂತೆ 'ಆಯುಷ್ಮಾನ್ ಭವ' ಚಿತ್ರದಲ್ಲೂ ಹಾರರ್ ಟಚ್ ಇರೋದು ಪಕ್ಕಾ ಆಗಿದೆ. ಸದ್ಯ ಆಯುಷ್ಮಾನ್ ಭವ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳಲ್ಲಿ ಥ್ರಿಲ್ ಹೆಚ್ಚಿಸಿದೆ.
Recommended Video
ಕಾರು ನಿಲ್ಲಿಸಿ ತಾತನಿಗೆ ಹಣ ಕೊಟ್ಟ ಸ್ಯಾಂಡಲ್ ವುಡ್ ಸ್ಟಾರ್
ಸಿನಿಮಾದಲ್ಲಿ ದೆವ್ವ ಇದೆ ಎನ್ನುವುದರ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಆದರೆ, ಯಾರ ದೇಹದ ಮೇಲೆ ದೆವ್ವ ಬರುತ್ತೆ, ಯಾರು ದೆವ್ವ ಎಂಬುದು ಗೌಪ್ಯವಾಗಿದೆ. ಶಿವಲಿಂಗ ಸಿನಿಮಾದ ಬಳಿಕ ಮತ್ತೆ ಶಿವರಾಜ್ ಕುಮಾರ್ ಅವರು ದೆವ್ವದ ಬೆನ್ನತ್ತಿ ಹೋಗಿರುವುದು ಅಭಿಮಾನಿಗಳಲ್ಲಿ ಕೌತುಕ ಹೆಚ್ಚಿಸಿದೆ.
ಶಿವರಾಜ್ ಕುಮಾರ್ ನಾಯಕನಾಗಿ ನಟಿಸಿದ್ದು, ರಚಿತಾ ರಾಮ್ ನಾಯಕಿಯಾಗಿದ್ದಾರೆ. ಶಿವಾಜಿ ಪ್ರಭು, ಸುಹಾಸಿನಿ ಮಣಿರತ್ನಂ, ಸಾಧುಕೋಕಿಲಾ, ರಂಗಾಯಣ ರಘು ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ.
'ದಾದಾಸಾಹೇಬ್ ಫಾಲ್ಕೆ' ಅಮಿತಾಬ್ ಬಚ್ಚನ್ ಭೇಟಿಯಾದ ಶಿವರಾಜ್ ಕುಮಾರ್
ಕನ್ನಡದ ಆಪ್ತಮಿತ್ರ, ತಮಿಳಿನಲ್ಲಿ ಚಂದ್ರಮುಖಿ, ತೆಲುಗಿನಲ್ಲಿ ನಾಗವಲ್ಲಿ, ದೃಶ್ಯ, ಶಿವಲಿಂಗ, ಆರಕ್ಷಕ ಅಂತಹ ಥ್ರಿಲ್ಲಿಂಗ್ ಹಾಗೂ ಹಾರರ್ ಚಿತ್ರಗಳನ್ನ ನಿರ್ದೇಶನ ಮಾಡಿದ ಖ್ಯಾತಿ ಹೊಂದಿದ್ದಾರೆ ಪಿ ವಾಸು. ಇನ್ನುಳಿದಂತೆ ದ್ವಾರಕೀಶ್ ನಿರ್ಮಾಣದ ಈ ಚಿತ್ರ ಈಗಾಗಲೇ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾಗಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.