Don't Miss!
- News Namma Metro Service Extend: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯ್ಯೋ! ಈ ಸಿನಿಮಾದ ರೀತಿಯೇ ಇದೆ ಅಭಿನಂದನ್ ಕಥೆ
ನೈಜ ಘಟನೆಯನ್ನು ಇಟ್ಟುಕೊಂಡು ಭಾರತ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳು ಬಂದಿವೆ. ಆದರೆ, ಇಲ್ಲಿ ಸಿನಿಮಾದ ಕಥೆಯೇ ನಿಜವಾಗಿ ನಡೆದು ಹೋಗಿದೆ.
ಭಾರತದ ವಿಂಗ್ ಕಮಾಂಡರ್ ಅಭಿನಂದನ್ ಪಾಪಿ ಪಾಕಿಸ್ತಾನದ ಸೈನ್ಯಕ್ಕೆ ಸೆರೆ ಸಿಕ್ಕಿದ್ದಾರೆ. ಇಡೀ ಭಾರತವೇ 'ನಮ್ಮ ಹೀರೋ ವಾಪಸ್ ಬರಬೇಕು' ಎಂದು ಪ್ರಾರ್ಥನೆ ಮಾಡಿದೆ. ಇದರ ನಡುವೆಯೇ ಅಭಿನಂದನ್ ಅವರ ಕಥೆ 'ಕಾಟ್ರು ವೆಲೆಯಾಡು' ಸಿನಿಮಾಗೆ ಹೊಂದುತ್ತಿದೆ.
ತಾನೇ ಕೆಲಸ ಮಾಡಿದ ಸಿನಿಮಾದ ಕತೆಯಂತೆ ಆಗಿದೆ ಮಗನ ಬದುಕು
'ಕಾಟ್ರು ವೆಲೆಯಾಡು' ಮಣಿರತ್ನಂ ನಿರ್ದೇಶನದಲ್ಲಿ 2017ರಲ್ಲಿ ಬಂದ ಸಿನಿಮಾ. ಈ ಸಿನಿಮಾದಲ್ಲಿಯೂ ನಾಯಕ ಪಾಕಿಸ್ತಾನದ ಸೈನ್ಯಕ್ಕೆ ಸೆರೆಯಾಗುತ್ತಾನೆ. ಅಚ್ಚರಿ ವಿಷಯ ಏನೆಂದರೆ, ಈ ಸಿನಿಮಾದ ಕಥೆಗೆ ಕೆಲಸ ಮಾಡಿದ್ದು, ಅಭಿನಂದನ್ ಅವರ ತಂದೆ ವಾರ್ತಮನ್.
ವಾರ್ತಮನ್ ಏರ್ ಮಾರ್ಷಲ್ ಆಗಿ ಕೆಲಸ ಮಾಡುತ್ತಿದ್ದರು. ಈ ಕಾರಣ 'ಕಾಟ್ರು ವೆಲೆಯಾಡು' ಸಿನಿಮಾದ ಕಥೆಗೆ ಅವರು ಸಹಾಯ ಮಾಡಿದ್ದರು. ವಿಪರ್ಯಾಸ ಅಂದರೆ, ಚಿತ್ರದ ಕಥೆಯ ರೀತಿಯೇ ಅವರ ಪುತ್ರ ಅಭಿನಂದನ್ ಪಾಕ್ ಸೆರೆಯಲ್ಲಿ ಇದ್ದಾರೆ.
ಅಭಿನಂದನ್ ಅವರ ತಂದೆ ವಾರ್ತಮನ್ ಅವರು ಭಾರತೀಯ ವಾಯು ಸೇನೆಯಲ್ಲಿ ಬಹುಕಾಲ ಸೇವೆ ಸಲ್ಲಿಸಿದವರು. ಏರ್ ಮಾರ್ಷಲ್ ಅಂತಹ ಉನ್ನತ ಹುದ್ದೆಗಳನ್ನು ನಿಭಾಯಿಸಿ ನಿವೃತ್ತರಾಗಿದ್ದಾರೆ. ಇನ್ನು, ಪಾಕ್ ಕಪಿಮುಷ್ಟಿಯಿಂದ ಭಾರತಾಂಬೆಯ ಈ ಹೆಮ್ಮೆಯ ಪುತ್ರ ಅದಷ್ಟು ಬೇಗ ತಾಯ್ನಾಡಿಗೆ ವಾಪನ್ ಬರಲಿ ಎಂದು ಪ್ರಾರ್ಥಿಸೊಣ.