Don't Miss!
- News ನೇಹಾ ಕೊಲೆ: ಫಯಾಜ್ ಜೈಲಲ್ಲಿದ್ದರೂ ಆತನ ಮೊಬೈಲ್ನಲ್ಲಿದ್ದ ಫೋಟೋ ಲೀಕ್ ಆಗಿದ್ದೇಗೆ?: ಪ್ರಹ್ಲಾದ್ ಜೋಶಿ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೆಲುವಿನ ಹೊಸ್ತಿಲಲ್ಲಿ ಸುಮಲತಾ : ಅಭಿಷೇಕ್ ಮೊದಲ ಪ್ರತಿಕ್ರಿಯೆ
ಮಂಡ್ಯ ಲೋಕಸಭಾ ಚುನಾವಣೆಯ ಫಲಿತಾಂಶ ಅಂತಿಮ ಹಂತಕ್ಕೆ ಬರುತ್ತಿದೆ. ನಟಿ ಸುಮಲತಾ ಅಂಬರೀಶ್ ಗೆಲುವಿನ ಹೊಸ್ತಿಲಲ್ಲಿ ಇದ್ದಾರೆ. ನಿಖಿಲ್ ಕುಮಾರ್ ವಿರುದ್ಧ 50 ರಿಂದ 55 ಸಾವಿರ ಮತಗಳ ಮುನ್ನಡೆಯಲ್ಲಿ ಸುಮಲತಾ ಇದ್ದಾರೆ.
ಲೋಕಸಭೆ ಚುನಾವಣೆ 2019 ಫಲಿತಾಂಶ LIVE : ಶತ್ರುಘ್ನ ಸಿನ್ಹಾಗೆ ಹೀನಾಯ ಸೋಲು
ಸುಮಲತಾ ಅವರ ಭಾರಿ ಮುನ್ನಡೆಯ ಬಗ್ಗೆ ಪುತ್ರ ಅಭಿಷೇಕ್ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ''ಲೀಡ್ ಜಾಸ್ತಿ ಇದೆ. ಆದರೂ ಇನ್ನು ಮತ ಎಣಿಕೆ ಬಾಕಿ ಇದೆ. ನಮ್ಮ ಹೋರಾಟಕ್ಕೆ ಜನ ಆಶೀರ್ವಾದ ಮಾಡಿದ್ದಾರೆ.'' ಎಂದು ಸಂತಸ ಹಂಚಿಕೊಂಡಿದ್ದಾರೆ.
''ನಮ್ಮ ಕೈಲಾದ ಪ್ರಯತ್ನ ಮಾಡಿದ್ವಿ. ಜನ ಮತ್ತು ದೇವರನ್ನು ನಂಬಿದ್ದೇವು. ಗೆದ್ದರೆ ಸಾಕು ಎಂದುಕೊಂಡಿದ್ವಿ. ಆದರೆ, ಲೀಡ್ ಕೂಡ ಚೆನ್ನಾಗಿದೆ.'' ಎಂದು ತಮ್ಮ ಗೆಲುವನ್ನು ಜನರಿಗೆ ಹಾಗೂ ದೇವರಿಗೆ ಅರ್ಪಿಸಿದ್ದಾರೆ.
ಇಷ್ಟು ಮಾತನಾಡಿದರುವ ಅಭಿಷೇಕ್ ಗೆಲುವು ಅಧಿಕೃತವಾಗಿ ಘೋಷಣೆ ಮಾಡಿದ ನಂತರ ಇನ್ನಷ್ಟು ವಿಚಾರ ಹಂಚಿಕೊಳ್ಳುತ್ತೇನೆ ಎಂದರು. ಈಗಾಗಲೇ ಅಭಿಮಾನಿಗಳು ಹಾಗೂ ಸ್ನೇಹಿತರು ಫೋನ್ ಕರೆ ಮೂಲಕ ಅಭಿಷೇಕ್ ಅವರಿಗೆ ಅಭಿನಂದಿಸುತ್ತಿದ್ದಾರಂತೆ.
ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧೆ ಮಾಡಿದ್ದು, ಸಿ ಎಂ ಪುತ್ರ ನಿಖಿಲ್ ಕುಮಾರ್ ಅವರ ಎದುರಾಳಿ ಆಗಿದ್ದರು.