Don't Miss!
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾರ್ಥಿವ ಶರೀರ ರವಾನೆ ಬಗ್ಗೆ ಅಂಬಿ ನಿಧನದ ದಿನ ಸಿಎಂ ಹೇಳಿದ್ದೇನು?
Recommended Video
ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥೀವ ಶರೀರದ ರವಾನೆ ವಿಷಯ ರಾಜಕೀಯವಾಗಿ ಭಾರಿ ಎಳೆದಾಡಲಾಗುತ್ತಿತ್ತು. ಪ್ರಚಾರದ ವೇಳೆ 'ರೆಬೆಲ್ ಸ್ಟಾರ್ ಅಂಬರೀಶ್ ಪಾರ್ಥೀವ ಶರೀರವನ್ನು ಮಂಡ್ಯಗೆ ಕರೆತರಲು ಹೇಳಿದ್ದು ನಾನೆ' ಎಂದು ಸಿ ಎಂ ಕುಮಾರಸ್ವಾಮಿ ಹೇಳುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು.
ಏಪ್ರಿಲ್ 16ರಂದು ನಡೆದ ಬಹಿರಂಗ ಸಭೆಯಲ್ಲಿ ಸಿಎಂ ಮಾತಿಗೆ ತಿರುಗೇಟು ನೀಡಿದ್ದ ನಟ ಅಭಿಷೇಕ್ ಅಂಬರೀಶ್ "ಅಪ್ಪನ ಪಾರ್ಥಿವ ಶರೀರವನ್ನು ಮಂಡ್ಯಗೆ ಕರೆದುಕೊಂಡು ಹೋಗಲು ಹೇಳಿದ್ದು ನಾನೆ. ಅಪ್ಪನ ಮೇಲೆ ಆಣೆ ಮಾಡಿ ಹೇಳುತ್ತೇನೆ" ಎಂದು ಬಹಿರಂಗ ಸಭೆಯಲ್ಲಿ ಮಂಡ್ಯ ಜನರ ಮುಂದೆ ಕೂಗಿ ಕೂಗಿ ಹೇಳಿದ್ದರು.
'ಅಂಬಿ ಪಾರ್ಥಿವ ಶರೀರ ಮಂಡ್ಯಗೆ ತನ್ನಿ' ಎಂದಿದ್ದು ನಾನೇ: ಅಭಿಷೇಕ್
ಅಂಬರೀಶ್ ನಿಧನದ ದಿನ ನಿಜಕ್ಕು ಏನು ನಡೆದಿತ್ತು ಎನ್ನುವುದರ ಬಗ್ಗೆ ಅಂಬಿ ನಿಧನದ ದಿನ ಸಿ ಎಂ ಕುಮಾರಸ್ವಾಮಿ ಮಾದ್ಯಮದ ಜೊತೆ ಮಾತನಾಡಿದ್ದ ವೀಡಿಯೋ ಈಗ ವೈರಲ್ ಆಗುತ್ತಿದೆ. "ಅಂಬರೀಶ್ ಪಾರ್ಥೀವ ಶರೀರವನ್ನು ಮಂಡ್ಯಗೆ ಕೆರೆದುಕೊಂಡು ಹೋಗಬೇಕು ಎನ್ನುವುದು ಅಭಿಷೇಕ್ ಅವರ ಆಸೆಯಾಗಿದೆ. ಅಂಬರೀಶ್ ಅವರಿಗೆ ಅಪಾರ ಪ್ರೀತಿ ನೀಡಿದ ಮಂಡ್ಯಗೆ ಅಂಬರೀಶ್ ಪಾರ್ಥೀವ ಶರೀರ ತೆಗೆದುಕೊಂಡು ಹೋಗುವುದು ಅಭಿಷೇಕ್ ಒತ್ತಾಯವಾಗಿದೆ. ಆದರೆ ಭದ್ರತೆ ದೃಷ್ಟಿಯಿಂದ ಸಾಧ್ಯವಾಗುತ್ತಿಲ್ಲ. ಮಂಡ್ಯದ ಜನ ಬೆಂಗಳೂರಿಗೆ ಬಂದು ಅಂತಿಮ ದರ್ಶನ ಪಡೆಯಿರಿ" ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದರು.
ಈ ವೀಡಿಯೋ ಈಗ ಎಲ್ಲಾ ಕಡೆ ಹರಿದಾಡುತ್ತಿದ್ದು, ಸಿಎಂ ಮಾತುಗಳೀಗ ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಕುಮಾರಸ್ವಾಮಿ ನಿಜಕ್ಕು ಸುಳ್ಳು ಹೇಳಿದ್ರಾ ಎನ್ನುವ ಅನುಮಾನ ಮಂಡ್ಯ ಜನರನ್ನು ಕಾಡುತ್ತಿದೆ.