Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಣಾ' ಚಿತ್ರೀಕರಣ ಸೆಟ್ನಲ್ಲಿ ಅವಘಡ: ಫೊಟೊಗ್ರಾಫರ್ಗೆ ಗಂಭೀರ ಗಾಯ
ಕನ್ನಡ ಸಿನಿಮಾ 'ರಾಣಾ'ದ ಚಿತ್ರೀಕರಣ ಸೆಟ್ನಲ್ಲಿ ನಡೆದಿರುವ ಅವಘಡದಿಂದಾಗಿ ಸ್ಟಿಲ್ ಫೊಟೊಗ್ರಾಫರ್ ಪಳನಿಗೆ ತೀವ್ರ ಗಾಯವಾಗಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ನಟಿಸುತ್ತಿರುವ 'ರಾಣಾ' ಸಿನಿಮಾದ ಚಿತ್ರೀಕರಣವು ಮಿನರ್ವಾ ಮಿಲ್ಸ್ನಲ್ಲಿ ನಡೆಯುತ್ತಿತ್ತು. ಚಿತ್ರೀಕರಣದ ವೇಳೆ ಸ್ಟಿಲ್ ಫೊಟೊಗ್ರಾಫರ್ ಪಳನಿ ತಲೆಯ ಮೇಲೆ ಕಬ್ಬಿಣದ ಕಂಬವೊಂದು ಬಿದ್ದು ತೀವ್ರ ಪೆಟ್ಟಾಗಿದೆ.
ಕೂಡಲೇ ಪಳನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಳನಿಗೆ ನಳಿಕೆ ಮೂಲಕ ಆಮ್ಲಜನಕ ಹಾಗೂ ಆಹಾರ ಸರಬರಾಜು ಮಾಡಲಾಗುತ್ತಿದೆ. ಪಳನಿಯನ್ನು ಸುಗುಣ ಆಸ್ಪತ್ರೆಯಲ್ಲಿ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
'ರಾಣಾ' ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಕೆಲವು ದಿನಗಳಷ್ಟೆ ಆಗಿದೆ. ಈ ನಡುವೆ ಇಂಥಹಾ ಅವಘಡ ಸಂಭವಿಸಿದೆ.
ಪಳನಿಯ ಜೀವನಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರಾದರೂ ಚೇತರಿಕೆಗೆ ಹೆಚ್ಚು ದಿನಗಳು ಬೇಕಾಗಿದೆ ಎನ್ನಲಾಗಿದೆ.