Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಣಾ' ಚಿತ್ರೀಕರಣ ಸೆಟ್ನಲ್ಲಿ ಅವಘಡ: ಫೊಟೊಗ್ರಾಫರ್ಗೆ ಗಂಭೀರ ಗಾಯ
ಕನ್ನಡ ಸಿನಿಮಾ 'ರಾಣಾ'ದ ಚಿತ್ರೀಕರಣ ಸೆಟ್ನಲ್ಲಿ ನಡೆದಿರುವ ಅವಘಡದಿಂದಾಗಿ ಸ್ಟಿಲ್ ಫೊಟೊಗ್ರಾಫರ್ ಪಳನಿಗೆ ತೀವ್ರ ಗಾಯವಾಗಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ನಟಿಸುತ್ತಿರುವ 'ರಾಣಾ' ಸಿನಿಮಾದ ಚಿತ್ರೀಕರಣವು ಮಿನರ್ವಾ ಮಿಲ್ಸ್ನಲ್ಲಿ ನಡೆಯುತ್ತಿತ್ತು. ಚಿತ್ರೀಕರಣದ ವೇಳೆ ಸ್ಟಿಲ್ ಫೊಟೊಗ್ರಾಫರ್ ಪಳನಿ ತಲೆಯ ಮೇಲೆ ಕಬ್ಬಿಣದ ಕಂಬವೊಂದು ಬಿದ್ದು ತೀವ್ರ ಪೆಟ್ಟಾಗಿದೆ.
ಕೂಡಲೇ ಪಳನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಳನಿಗೆ ನಳಿಕೆ ಮೂಲಕ ಆಮ್ಲಜನಕ ಹಾಗೂ ಆಹಾರ ಸರಬರಾಜು ಮಾಡಲಾಗುತ್ತಿದೆ. ಪಳನಿಯನ್ನು ಸುಗುಣ ಆಸ್ಪತ್ರೆಯಲ್ಲಿ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
'ರಾಣಾ' ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಕೆಲವು ದಿನಗಳಷ್ಟೆ ಆಗಿದೆ. ಈ ನಡುವೆ ಇಂಥಹಾ ಅವಘಡ ಸಂಭವಿಸಿದೆ.
ಪಳನಿಯ ಜೀವನಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರಾದರೂ ಚೇತರಿಕೆಗೆ ಹೆಚ್ಚು ದಿನಗಳು ಬೇಕಾಗಿದೆ ಎನ್ನಲಾಗಿದೆ.