Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ 'ಕಾಲ ಕರಿಕಾಲನ್' ಚಿತ್ರಸೆಟ್ನಲ್ಲಿ ಅವಘಡ, ಓರ್ವ ಸಾವು
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲ ಕರಿಕಾಲನ್' ಚಿತ್ರದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಆದಾಗಿನಿಂದ ಚಿತ್ರತಂಡಕ್ಕೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇದೆ. 'ನ್ಯೂಸ್ 18' ವರದಿ ಪ್ರಕಾರ ಈ ಚಿತ್ರದಲ್ಲಿ ವರ್ಕ್ ಮಾಡುತ್ತಿದ್ದ ವ್ಯಕ್ತಿಯೋರ್ವ ಈಗ ಮೃತಪಟ್ಟಿದ್ದಾನೆ ಎಂದು ತಿಳಿದಿದೆ.
'ಕಾಲ ಕರಿಕಾಲನ್' ಚಿತ್ರತಂಡದಲ್ಲಿ ಕೆಲಸ ಮಾಡುತ್ತಿದ್ದ ಮೈಕೆಲ್ ಎಂಬಾತ ಚಿತ್ರಸೆಟ್ ನಲ್ಲಿನ ಎಲೆಕ್ಟ್ರಿಕ್ ವೈರಿನ ಮೇಲೆ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ. ಮೈಕೆಲ್ ಎಲೆಕ್ಟ್ರಿಕ್ ವೈರಿನ ಮೇಲೆ ಆಕಸ್ಮಿಕವಾಗಿ ಬಿದ್ದು ಸಮಸ್ಯೆ ಉಂಟಾದ ತಕ್ಷಣ ಚಿತ್ರತಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದಿದೆ. ಈ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ.
ತಲೈವಾ 'ಕಾಲ ಕರಿಕಾಲನ್' ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಕೊಳಗೇರಿ ನಿವಾಸಿಗಳ ಅಭಿವೃದ್ದಿ ಮತ್ತು ಹಕ್ಕುಗಳಿಗಾಗಿ ಈ ಚಿತ್ರದಲ್ಲಿ ಹೋರಾಟ ಮಾಡಲಿದ್ದಾರೆ. ಇತ್ತೀಚೆಗಷ್ಟೆ ಮುಂಬೈನಲ್ಲಿ ಶೂಟಿಂಗ್ ಮುಗಿಸಿದ್ದ ರಜನಿಕಾಂತ್ ಚೆನ್ನೈಗೆ ವಾಪಸ್ಸಾಗಿದ್ದರು. ಚಿತ್ರದ ತಮಿಳು ನಾಡಿನ ಭಾಗದ ಚಿತ್ರೀಕರಣಕ್ಕಾಗಿ 5 ಕೋಟಿ ರೂ ನಲ್ಲಿ ಈವಿಪಿ ಸ್ಟುಡಿಯೋದಲ್ಲಿ ಸೆಟ್ ನಿರ್ಮಾಣ ಮಾಡಲಾಗಿದೆ.
ಅಂದಹಾಗೆ ಪಾ ರಂಜಿತ್ ನಿರ್ದೇಶನದ 'ಕಾಲ ಕರಿಕಾಲನ್' ಚಿತ್ರವನ್ನು ರಜನಿಕಾಂತ್ ಅಳಿಯ ನಟ ಧನುಶ್ ನಿರ್ಮಾಣ ಮಾಡುತ್ತಿದ್ದಾರೆ.