Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿ 'ಕಾಲ ಕರಿಕಾಲನ್' ಚಿತ್ರಸೆಟ್ನಲ್ಲಿ ಅವಘಡ, ಓರ್ವ ಸಾವು
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕಾಲ ಕರಿಕಾಲನ್' ಚಿತ್ರದ ಟೈಟಲ್ ಮತ್ತು ಪೋಸ್ಟರ್ ಬಿಡುಗಡೆ ಆದಾಗಿನಿಂದ ಚಿತ್ರತಂಡಕ್ಕೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇದೆ. 'ನ್ಯೂಸ್ 18' ವರದಿ ಪ್ರಕಾರ ಈ ಚಿತ್ರದಲ್ಲಿ ವರ್ಕ್ ಮಾಡುತ್ತಿದ್ದ ವ್ಯಕ್ತಿಯೋರ್ವ ಈಗ ಮೃತಪಟ್ಟಿದ್ದಾನೆ ಎಂದು ತಿಳಿದಿದೆ.
'ಕಾಲ ಕರಿಕಾಲನ್' ಚಿತ್ರತಂಡದಲ್ಲಿ ಕೆಲಸ ಮಾಡುತ್ತಿದ್ದ ಮೈಕೆಲ್ ಎಂಬಾತ ಚಿತ್ರಸೆಟ್ ನಲ್ಲಿನ ಎಲೆಕ್ಟ್ರಿಕ್ ವೈರಿನ ಮೇಲೆ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ. ಮೈಕೆಲ್ ಎಲೆಕ್ಟ್ರಿಕ್ ವೈರಿನ ಮೇಲೆ ಆಕಸ್ಮಿಕವಾಗಿ ಬಿದ್ದು ಸಮಸ್ಯೆ ಉಂಟಾದ ತಕ್ಷಣ ಚಿತ್ರತಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದಿದೆ. ಈ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ.
ತಲೈವಾ 'ಕಾಲ ಕರಿಕಾಲನ್' ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಕೊಳಗೇರಿ ನಿವಾಸಿಗಳ ಅಭಿವೃದ್ದಿ ಮತ್ತು ಹಕ್ಕುಗಳಿಗಾಗಿ ಈ ಚಿತ್ರದಲ್ಲಿ ಹೋರಾಟ ಮಾಡಲಿದ್ದಾರೆ. ಇತ್ತೀಚೆಗಷ್ಟೆ ಮುಂಬೈನಲ್ಲಿ ಶೂಟಿಂಗ್ ಮುಗಿಸಿದ್ದ ರಜನಿಕಾಂತ್ ಚೆನ್ನೈಗೆ ವಾಪಸ್ಸಾಗಿದ್ದರು. ಚಿತ್ರದ ತಮಿಳು ನಾಡಿನ ಭಾಗದ ಚಿತ್ರೀಕರಣಕ್ಕಾಗಿ 5 ಕೋಟಿ ರೂ ನಲ್ಲಿ ಈವಿಪಿ ಸ್ಟುಡಿಯೋದಲ್ಲಿ ಸೆಟ್ ನಿರ್ಮಾಣ ಮಾಡಲಾಗಿದೆ.
ಅಂದಹಾಗೆ ಪಾ ರಂಜಿತ್ ನಿರ್ದೇಶನದ 'ಕಾಲ ಕರಿಕಾಲನ್' ಚಿತ್ರವನ್ನು ರಜನಿಕಾಂತ್ ಅಳಿಯ ನಟ ಧನುಶ್ ನಿರ್ಮಾಣ ಮಾಡುತ್ತಿದ್ದಾರೆ.