Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವರ್ ಸ್ಟಾರ್ 'ಚಕ್ರವ್ಯೂಹ' ದಲ್ಲಿ ಖಳನಟನಾಗಿ ಅಭಿಮನ್ಯು ಸಿಂಗ್!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ 2016ನೇ ವರ್ಷದಲ್ಲಿ ಫುಲ್ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ. ಅದೇನಪ್ಪಾ ಅಂದ್ರೆ ನಿರ್ದೇಶಕ ದುನಿಯಾ ಸೂರಿ ಆಕ್ಷನ್-ಕಟ್ ಹೇಳಿರುವ, ರಾಧಿಕಾ ಪಂಡಿತ್, ಅಂಬರೀಶ್, ಸುಮಲತಾ, ಭಾರತಿ ವಿಷ್ಣುವರ್ಧನ್ ಮುಂತಾದವರು ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡಿರುವ, ಬಹುನಿರೀಕ್ಷಿತ 'ದೊಡ್ಮನೆ ಹುಡುಗ' ಚಿತ್ರದ ಚಿತ್ರೀಕರಣ ಬಹಳ ಭರದಿಂದ ಸಾಗುತ್ತಿದ್ದು, 2016 ಪವರ್ ಸ್ಟಾರ್ ಹುಟ್ಟುಹಬ್ಬದಂದು ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.['ಚಕ್ರವ್ಯೂಹ' ಭೇದಿಸಲಿರುವ ಪವರ್ ಸ್ಟಾರ್ ಪುನೀತ್]
ಜೊತೆಗೆ ಪುನೀತ್ ಅವರ 25ನೇ ಚಿತ್ರ 'ಚಕ್ರವ್ಯೂಹ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಈ ಚಿತ್ರವನ್ನು 2016ರಲ್ಲಿ ತೆರೆಗೆ ತರಲು ತಮಿಳು ನಿರ್ದೇಶಕ ಎಮ್ ಸರವನನ್ ಅವರು ಪ್ಲಾನ್ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಚಿತಾ ರಾಮ್ ಪುನೀತ್ ಅವರೊಂದಿಗೆ ಡ್ಯುಯೆಟ್ ಹಾಡಲಿದ್ದು, 'ಎನ್ನೈ ಅರಿಂದಾಲ್' ಖ್ಯಾತಿಯ ತಮಿಳು ನಟ ಅರುಣ್ ವಿಜಯ್ ಅವರು ನೆಗೆಟಿವ್ ಪಾತ್ರದಲ್ಲಿ ಮಿಂಚಿದ್ದಾರೆ.[ಪ್ರಾಣಾಪಾಯದಿಂದ ಬಚಾವ್ ಆದ 'ಚಕ್ರವ್ಯೂಹ' ಕೇಡಿ ಅರುಣ್ ವಿಜಯ್]
ಇದೀಗ 'ಚಕ್ರವ್ಯೂಹ' ಚಿತ್ರದಿಂದ ಬಂದಿರುವ ಲೇಟೆಸ್ಟ್ ಮಾಹಿತಿ ಏನಪ್ಪಾ ಅಂದ್ರೆ, ಬಾಲಿವುಡ್, ಟಾಲಿವುಡ್, ಕಾಲಿವುಡ್, ನಲ್ಲಿ ಖಳನಟನಾಗಿ ಮಿಂಚಿರುವ ಬಹುಭಾಷಾ ನಟ ಅಭಿಮನ್ಯು ಸಿಂಗ್ ಅವರು ಕೂಡ ಈ ಚಿತ್ರದಲ್ಲಿ ವಿಲನ್ ಪಾತ್ರ ವಹಿಸಲಿದ್ದು, ನಟ ಅರುಣ್ ವಿಜಯ್ ಅವರಿಗೆ ಸಾಥ್ ನೀಡಲಿದ್ದಾರೆ.[ಪುನೀತ್ ರಾಜ್ ಕುಮಾರ್ ಗೆ ಟಕ್ಕರ್ ಕೊಡಲಿರುವ ತಮಿಳು ಕೇಡಿ]
ಅಂದಹಾಗೆ ಬೇರೆ ಭಾಷೆಗಳಲ್ಲಿ ವಿಲನ್ ಪಾತ್ರದ ಮೂಲಕ ತಮ್ಮ ಖದರ್ ತೋರಿರುವ ಈ ಇಬ್ಬರು ನಟರಿಗೂ ಸ್ಯಾಂಡಲ್ ವುಡ್ ಕ್ಷೇತ್ರ ಹೊಸದಾಗಿರುವುದರಿಂದ, ಕನ್ನಡದಲ್ಲಿ ಅವರ ನಟನೆ ಹೇಗಿರುತ್ತದೆ ಅನ್ನೋದು ಚಿತ್ರ ಬಿಡುಗಡೆಯಾದ ನಂತರ ತಿಳಿಯಬೇಕಿದೆ.