Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಯಂಬತ್ತೂರಿಗೆ ಹೊರಟು ನಿಂತ ರೆಬೆಲ್ ಸ್ಟಾರ್ ಪುತ್ರ
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಸದ್ಯ ಬೆಂಗಳೂರು ಬಿಟ್ಟು ಕೊಯಂಬತ್ತೂರಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಅರೆ ಅಭಿಷೇಕ್ ಅವರಿಗೆ ಬೆಂಗಳೂರು ಬೋರ್ ಆಯ್ತಾ ಅಂತ ಕೇಳಬೇಡಿ ಏಕೆಂದರೆ ಅಭಿಷೇಕ್ ಕೊಯಂಬತ್ತೂರಿಗೆ ಹೋಗುತ್ತಿರುವುದು ಸಿನಿಮಾ ಚಿತ್ರೀಕರಣಕ್ಕಾಗಿ.
ಅಭಿಷೇಕ್ ಅಭಿನಯದ 'ಅಮರ್' ಸಿನಿಮಾ ಶೂಟಿಂಗ್ ಕೊಯಂಬತ್ತೂರಿಯಲ್ಲಿ ನಡೆಯಲಿದೆ. ಅದೇ ಕಾರಣದಿಂದ ಚಿತ್ರತಂಡ ಇದೇ ತಿಂಗಳು ಅಂದರೆ ಜೂನ್ 28ರಿಂದ ಕೊಯಂಬತ್ತೂರಿಗೆ ಚಿತ್ರೀಕರಣ ಶುರು ಮಾಡಲಿದೆ. 'ಅಮರ್' ಸಿನಿಮಾದಲ್ಲಿ ಅಭಿಷೇಕ್ ಜೊತೆ ತಾನ್ಯ ಹೋಪೆ ನಾಯಕಿಯಾಗಿ ಅಭಿನಯ ಮಾಡುತ್ತಿದ್ದಾರೆ.
'ಅಮರ್' ಚಿತ್ರಕ್ಕಾಗಿ ತೆಲುಗಿನ ದೊಡ್ಡ ಸಿನಿಮಾವನ್ನು ಮುಂದಕ್ಕೆ ಹಾಕಿದ ನಾಗಶೇಖರ್
ನಾಗಶೇಖರ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು ಸಂದೇಶ್ ನಾಗರಾಜ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. 'ಅಮರ್' ಅಭಿಷೇಕ್ ಅಭಿನಯದ ಚೊಚ್ಚಲ ಸಿನಿಮಾ ಆಗಿದ್ದು ಪಕ್ಕಾ ಕಮರ್ಷಿಯಲ್ ಚಿತ್ರ.
ಮುಹೂರ್ತ ಹಾಗೂ ಫೋಟೋ ಶೂಟ್ ಮುಗಿಸಿರುವ ಚಿತ್ರತಂಡ ಈ ತಿಂಗಳ ಅಂತ್ಯದಿಂದ ಶೂಟಿಂಗ್ ನಲ್ಲಿ ಬ್ಯೂಸಿ ಆಗಲಿದೆ. ಈ ಹಿಂದೆ ನಾಗಶೇಖರ್ ಚಿತ್ರಗಳಲ್ಲಿ ಕೆಲಸ ಮಾಡಿದ ತಂತ್ರಜ್ಞರೇ 'ಅಮರ್' ಸಿನಿಮಾದಲ್ಲಿಯೂ ವರ್ಕ್ ಮಾಡಲಿದ್ದಾರೆ.