Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯನಗರ ಜಿಲ್ಲೆ ರಚನೆ ಬೆಂಬಲಿಸಿದ ನಟ ಅಜಯ್ ರಾವ್
ಕರ್ನಾಟಕದ ನೂತನ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲು ಮುಂದಾಗಿರುವ ಸರ್ಕಾರದ ನಡೆಯನ್ನು ಚಲನಚಿತ್ರ ನಟ ಅಜಯ್ ರಾವ್ ಬೆಂಬಲಿಸಿದ್ದಾರೆ. ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ರಚಿಸಿರುವುದನ್ನು ಅಜಯ್ ರಾವ್ ಸ್ವಾಗತಿಸಿದ್ದಾರೆ.
ಈ ಕುರಿತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅಜಯ್ ರಾವ್ ಧನ್ಯವಾದ ತಿಳಿಸಿ ಮಂಗಳವಾರ ಅರಣ್ಯ ಸಚಿವ ಆನಂದ್ ಸಿಂಗ್ಗೆ ಪತ್ರ ಸಲ್ಲಿಸಿದ್ದಾರೆ.
ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ
''ನನ್ನ ಜನ್ಮ ಭೂಮಿ, ನನ್ನ ಸ್ವಂತ ಊರು ಹೊಸಪೇಟೆ, ವಿಜಯ ನಗರ ಜಿಲ್ಲೆ ಎಂದು ಘೋಷಣೆಯಾಗಿರುವುದು ನನಗೆ ಒಂದು ದೊಡ್ಡ ಸಂಭ್ರಮ. ಹಾಗಾಗಿ ನಮ್ಮ ರಾಜ್ಯದ ಅರಣ್ಯ ಮತ್ತು ಪರಿಸರ ಖಾತೆ ಸಚಿವರು, ಹಾಗು ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಾದ, "ವಿಜಯನಗರ ಜಿಲ್ಲಾ ಕಾರಣೀಭೂತ" ಸನ್ಮಾನ್ಯ ಶ್ರೀ ಆನಂದ ಸಿಂಗ್ ರವರಿಗೆ ನನ್ನ ಬೆಂಬಲ ಹಾಗು ಮೆಚ್ಚುಗೆಯ ಪತ್ರವನ್ನು ನೀಡುವುದರ ಮೂಲಕ ಸಂತಸವನ್ನು ಹಂಚಿಕೊಂಡೆ'' ಎಂದು ಸಾಮಾಜಿಕ ಜಾಲತಾಣದಲ್ಲಿ ಪತ್ರವನ್ನು ಹಂಚಿಕೊಂಡಿದ್ದಾರೆ.
ಅಂದ್ಹಾಗೆ, ವಿಜಯನಗರವನ್ನು ಜಿಲ್ಲೆಯಾಗಿ ಘೋಷಿಸಬೇಕು ಎಂದು ಅನೇಕರು ಪ್ರತಿಭಟನೆ, ಹೋರಾಟ ಮಾಡಿದ್ದರು. ಮತ್ತೊಂದೆಡೆ ಅಖಂಡ ಬಳ್ಳಾರಿ ಜಿಲ್ಲೆಯನ್ನು ಆಗ್ರಹಿಸಿ ಸಹ ಹೋರಾಟ ನಡೆಯುತ್ತಿತ್ತು.
ವಿಜಯನಗರ ಜಿಲ್ಲೆ ರಚನೆ: ರೆಡ್ಡಿ-ರಾಮುಲು ಬಳಗದಲ್ಲಿ ಬಿರುಕು?
Recommended Video
ಈ ನಡುವೆ ಬಳ್ಳಾರಿಯಿಂದ 6 ತಾಲೂಕುಗಳನ್ನು ಬೇರ್ಪಡಿಸಿ ಹೊಸ ಮ್ಯಾಪ್ ರಚಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ಕೊಟ್ಟೂರು, ಹೂವಿನ ಹಡಗಲಿ ತಾಲೂಕುಗಳಿರಲಿವೆ.