Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೆಬಲ್ ಸ್ಟಾರ್ ಮರೆಯಾಗಿ ಇಂದಿಗೆ ಒಂದು ವರ್ಷ
ನವೆಂಬರ್ 24, 2018... ಆ ದಿನ ಯಾರು ನಿರೀಕ್ಷೆ ಮಾಡಿರದ ದುರ್ಘಟನೆವೊಂದು ನಡೆದು ಹೋಗಿತ್ತು. ರೆಬಲ್ ಸ್ಟಾರ್, ಕನ್ನಡ ಚಿತ್ರರಂಗದ ಕರ್ಣ ಅಂಬರೀಶ್ ನಿಧನ ಹೊಂದಿದರು. 66 ವರ್ಷದ ಅಂಬರೀಶ್ ಹೃದಯಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ವಿಧಿವಶರಾದರು.
ಅಂಬರೀಶ್ ಮರೆಯಾಗಿ ಇಂದಿಗೆ ಒಂದು ವರ್ಷಗಳು ಕಳೆದಿವೆ. ಜಲೀಲ ಇಲ್ಲ ಎನ್ನುವ ಬೇಸರ ಚಿತ್ರರಂಗ, ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರಲ್ಲಿ ಇದೆ. ಮೊದಲ ವರ್ಷದ ಪುಣ್ಯ ತಿಥಿಯ ವಿಶೇಷವಾಗಿ ಅಭಿಮಾನಿಗಳು ಅನ್ನ ಸಂತರ್ಪಣೆ ನಡೆಸುತ್ತಿದ್ದಾರೆ. ಈ ಮೂಲಕ ಅಂಬಿಗೆ ನಮನ ಸಲ್ಲಿಸುತ್ತಿದ್ದಾರೆ.
2014ರಲ್ಲಿ ಶ್ವಾಸಕೋಶದ ಸೋಂಕಿನಿಂದ ಬಳಲಿದ್ದ ಅಂಬರೀಶ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಜೊತೆಗೆ ಸಿಂಗಾಪುರಕ್ಕೂ ತೆರಳಿ ಮೌಂಟ್ ಎಲಿಜಬತ್ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದಿದ್ದರು. ಬಳಿಕ ಫಿಟ್ ಅಂಡ್ ಫೈನ್ ಆಗಿದ್ದ ಅಂಬರೀಶ್ ಸಿನಿಮಾ ಚಿತ್ರೀಕರಣಗಳಲ್ಲಿ ಭಾಗವಹಿಸಿದ್ದರು.
ಆದರೆ, ನವೆಂಬರ್ 24 2018 ರಂದು ಸಂಜೆ ವೇಳೆಗೆ ಉಸಿರಾಟದ ಸಮಸ್ಯೆಯಿಂದ ಬಳಲಿದ ನಟ ಅಂಬರೀಶ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾದರು.
'ಅಂಬಿ ನಿಂಗೆ ವಯಸ್ಸಾಯ್ತೋ' ಅವರ ಕೊನೆಯ ನಟನೆಯ ಸಿನಿಮಾವಾಗಿದೆ. 'ಕುರುಕ್ಷೇತ್ರ' ಸಿನಿಮಾ ಅವರ ನಿಧನದ ನಂತರ ಬಿಡುಗಡೆಯಾಯ್ತು. ಈ ಚಿತ್ರದಲ್ಲಿ ಅವರು ಬೀಷ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.