Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಅಂಬರೀಶ್ ಈಗ ಸಿಂಗಪುರದಲ್ಲಿ ಹೇಗಿದ್ದಾರೆ?
ನಟ, ವಸತಿ ಸಚಿವ ಅಂಬರೀಶ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿರುವುದು ಗೊತ್ತೇ ಇದೆ. ಕಳೆದ 15 ದಿನಗಳಿಂದ ಅವರಿಗೆ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಅಂಬರೀಶ್ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದ್ದು, ಅವರಿಗೆ ಹಾಕಿದ್ದ ವೆಂಟಿಲೇಟರನ್ನು ವೈದ್ಯರು ತೆಗೆದಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರನ್ನು ಜನರಲ್ ವಾರ್ಡ್ ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೌಂಟ್ ಎಲಿಜಬೆತ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. [ನಟ ಅಂಬರೀಶ್ ಆರೋಗ್ಯದ ಬಗ್ಗೆ ಮುಚ್ಚಿಟ್ಟ ಸತ್ಯಗಳು]
ಇದೇ ಸಂದರ್ಭದಲ್ಲಿ ಅಂಬಿ ಅವರ ಪತ್ನಿ ಸುಮಲತಾ ಅವರು ಮಾತನಾಡುತ್ತಾ, ಅಭಿಮಾನಿಗಳು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಅವರು ಆದಷ್ಟು ಬೇಗ ನಿಮ್ಮಲ್ಲರ ಮುಂದೆ ಮತ್ತೆ ಬರುತ್ತಾರೆ ಎಂದಿದ್ದಾರೆ.
ವೆಂಟಿಲೇಟರ್ ತೆಗೆದರೆ ಏನಾಗುತ್ತದೋ ಏನೋ, ಅಂಬಿ ಉಸಿರಾಡಲು ಸಾಧ್ಯವಾಗುತ್ತದೋ ಇಲ್ಲವೋ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದ್ದವು. ಈಗ ಅಂಬಿಗೆ ಹಾಕಿದ್ದ ವೆಂಟಿಲೇಟರ್ ತೆಗೆಯುವ ಮೂಲಕ ಅವರ ಎಲ್ಲಾ ಅನುಮಾನಗಳಿಗೆ ತೆರೆಬಿದ್ದಿದೆ.