Don't Miss!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಲಿಯುಗ ಕರ್ಣನಿಗೆ ಲಂಡನ್ ನಲ್ಲಿ ಸನ್ಮಾನ
ಲಂಡನ್ ನಗರದಲ್ಲಿ ವೈಭವಯುತವಾಗಿ ನಡೆದ ಈ ಸಮ್ಮೇಳನದಲ್ಲಿ ಯುರೋಪ್ ಖಂಡದಿಂದ ಸಾವಿರಾರು ಕನ್ನಡಿಗರು ಭಾಗವಹಿಸಿದ್ದರು. ಅಂಬರೀಷ್ ಅಲ್ಲದೆ ರಮ್ಯಾ, ಹಂಸಲೇಖ, ಶ್ರೀನಾಥ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು, ಶಾಲು ಹೊದೆಸಿ, ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂಬರೀಷ್, ನೀವು ನಮ್ಮ ಮೇಲೆ ತೋರಿದ ಪ್ರೀತಿಗೆ ಇಡೀ ಚಿತ್ರರಂಗ ಅಭಾರಿಯಾಗಿದೆ. ಕನ್ನಡ ಚಿತ್ರರಂಗದ ಏಳಿಗೆಗೆ ರಾಜಣ್ಣ, ವಿಷ್ಣು, ಪುಟ್ಟಣ್ಣ ಮುಂತಾದವರ ಕೊಡುಗೆ ಅಪಾರ. ಈ ಸನ್ಮಾನ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಕನ್ನಡ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆಯಾದಂತೆ ವಿಶ್ವದೆಲ್ಲದೆ ಏಕಕಾಲದಲ್ಲಿ ಬಿಡುಗಡೆ ಮಾಡಲು ಅಗತ್ಯ ಪ್ರಯತ್ನ ಮಾಡುತ್ತೇವೆ.
ನಿಮ್ಮ ಪ್ರೀತಿ ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ಇತ್ತೀಚಿಗೆ ಕೆಲವೊಂದು ಘಟನೆಗಳು ನಮ್ಮ ಚಿತ್ರರಂಗದಲ್ಲಿ ನಡೆಯಬಾರದಿತ್ತು. ಈ ಬಗ್ಗೆ ನಮಗೂ ಬಹಳಾ ವಿಷಾದವಿದೆ. ಇಂತಹ ಘಟನೆಗಳಿಂದ ನಮ್ಮ ಚಿತ್ರರಂಗದ ಮೇಲೆ ಏಟು ಬೀಳುತ್ತದೆ ಎಂದು ಅರಿತ್ತಿದ್ದೇವೆ. ಮತ್ತೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸುತ್ತೇವೆ ಎಂದು ಅಂಬರೀಷ್ ಹೇಳಿಕೆ ನೀಡಿದ್ದಾರೆ.