Don't Miss!
- News Karnataka Dam Water Level: ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ, ವಿವರ ಇಲ್ಲಿದೆ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: ಸಿಸಿಬಿ ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದೇನು?
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ ಮತ್ತು ನಟಿ ಅನುಶ್ರೀ ಅವರ ವಿಚಾರಣೆ ಮುಕ್ತಾಯವಾಗಿದೆ. ಇಂದು ಬೆಳಗ್ಗೆ ಮಂಗಳೂರಿನ ಸಿಸಿಬಿ ಅಧಿಕಾರಿಗಳ ಮುಂದೆ ಅನುಶ್ರೀ ಹಾಜರಾಗಿದ್ದರು. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಸತತ ಮೂರುವರೆ ಗಂಟೆಕಾಲ ಅನುಶ್ರೀ ವಿಚಾರಣೆ ಎದುರಿಸಿದ್ದಾರೆ.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅನುಶ್ರೀ, ಅಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ, ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ, ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅನುಶ್ರೀ, ಪಾರ್ಟಿಯ ವಿಚಾರವಾಗಿ ನನ್ನನ್ನು ವಿಚಾರಣೆಗೆ ಕರೆದಿಲ್ಲ. ಅವರು ನನ್ನ ಕೊರಿಯೋಗ್ರಾಫರ್ ಆಗಿದ್ದ ಕಾರಣ ಕರೆದಿದ್ದಾರೆ ಎಂದಿದ್ದಾರೆ.
ಡ್ರಗ್ಸ್ ಪ್ರಕರಣ: ಮಂಗಳೂರು CCB ಅಧಿಕಾರಿಗಳ ಮುಂದೆ ಹಾಜರಾದ ಅನುಶ್ರೀ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಕ್ಕಾಗಿರುವ ತರಣ್ 12 ವರ್ಷಗಳ ಹಿಂದೆ ನನಗೆ ಕೊರಿಯೋಗ್ರಾಫರ್ ಆಗಿದ್ದರು ಎಂದಿದ್ದಾರೆ. ಆಗ ಅವರು ಏನು ಮಾಡುತ್ತಿದ್ದರೊ ನನಗೆ ಗೊತ್ತಿಲ್ಲ. ಮಂಗಳೂರಿನಲ್ಲಿ ಅವರ ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ಮಾಡಿಕೊಟ್ಟಿದೆ. ಅದು ಬಿಟ್ಟರೆ ಅವರ ಪರಿಚಯ ಜಾಸ್ತಿ ಇಲ್ಲ ಎಂದಿದ್ದಾರೆ.
Recommended Video
ಪೊಲೀಸರು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದಿದ್ದಾರೆ. ಶನಿವಾರ ವಿಚಾರಣೆ ಇದಿದ್ದರಿಂದ ಶುಕ್ರವಾರ ಬೆಂಗಳೂರಿನಿಂದ ಹೊರಟು ಮಂಗಳೂರಿಗೆ ಬಂದಿದ್ದೇನೆ. ಪೊಲೀಸರು ಹೇಳಿದ ಸಮಯಕ್ಕೆ ಹಾಜರಾಗಿರುವುದಾಗಿ ಅನುಶ್ರೀ ಹೇಳಿದ್ದಾರೆ.