Don't Miss!
- News Narayana Murthy: ಮೊಮ್ಮಗನಿಗೆ ₹240 ಕೋಟಿ ಷೇರು ಉಡುಗೊರೆಯಾಗಿ ಕೊಟ್ಟ ಮೂರ್ತಿ
- Automobiles ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- Finance ಸಾಂಬಾರು ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ, ಇಂದು 276ಕ್ಕೂ ಹೆಚ್ಚು ಚಿನ್ನಾಭರಣ ಮಳಿಗೆಗಳ ಒಡೆಯ!
- Lifestyle ಹಸುವಿನ ಹಾಲಿನಿಂದ ಇಡೀ ವಿಶ್ವಕ್ಕೆ ಇನ್ಸುಲಿನ್..! ಹೊಸ ಅಧ್ಯಯನದಲ್ಲಿ ಬಹಿರಂಗ.!
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Technology Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: ಸಿಸಿಬಿ ವಿಚಾರಣೆ ಬಳಿಕ ಅನುಶ್ರೀ ಹೇಳಿದ್ದೇನು?
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ ಮತ್ತು ನಟಿ ಅನುಶ್ರೀ ಅವರ ವಿಚಾರಣೆ ಮುಕ್ತಾಯವಾಗಿದೆ. ಇಂದು ಬೆಳಗ್ಗೆ ಮಂಗಳೂರಿನ ಸಿಸಿಬಿ ಅಧಿಕಾರಿಗಳ ಮುಂದೆ ಅನುಶ್ರೀ ಹಾಜರಾಗಿದ್ದರು. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಸತತ ಮೂರುವರೆ ಗಂಟೆಕಾಲ ಅನುಶ್ರೀ ವಿಚಾರಣೆ ಎದುರಿಸಿದ್ದಾರೆ.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅನುಶ್ರೀ, ಅಧಿಕಾರಿಗಳು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ, ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ, ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅನುಶ್ರೀ, ಪಾರ್ಟಿಯ ವಿಚಾರವಾಗಿ ನನ್ನನ್ನು ವಿಚಾರಣೆಗೆ ಕರೆದಿಲ್ಲ. ಅವರು ನನ್ನ ಕೊರಿಯೋಗ್ರಾಫರ್ ಆಗಿದ್ದ ಕಾರಣ ಕರೆದಿದ್ದಾರೆ ಎಂದಿದ್ದಾರೆ.
ಡ್ರಗ್ಸ್ ಪ್ರಕರಣ: ಮಂಗಳೂರು CCB ಅಧಿಕಾರಿಗಳ ಮುಂದೆ ಹಾಜರಾದ ಅನುಶ್ರೀ
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಕ್ಕಾಗಿರುವ ತರಣ್ 12 ವರ್ಷಗಳ ಹಿಂದೆ ನನಗೆ ಕೊರಿಯೋಗ್ರಾಫರ್ ಆಗಿದ್ದರು ಎಂದಿದ್ದಾರೆ. ಆಗ ಅವರು ಏನು ಮಾಡುತ್ತಿದ್ದರೊ ನನಗೆ ಗೊತ್ತಿಲ್ಲ. ಮಂಗಳೂರಿನಲ್ಲಿ ಅವರ ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ಮಾಡಿಕೊಟ್ಟಿದೆ. ಅದು ಬಿಟ್ಟರೆ ಅವರ ಪರಿಚಯ ಜಾಸ್ತಿ ಇಲ್ಲ ಎಂದಿದ್ದಾರೆ.
Recommended Video
ಪೊಲೀಸರು ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದಿದ್ದಾರೆ. ಶನಿವಾರ ವಿಚಾರಣೆ ಇದಿದ್ದರಿಂದ ಶುಕ್ರವಾರ ಬೆಂಗಳೂರಿನಿಂದ ಹೊರಟು ಮಂಗಳೂರಿಗೆ ಬಂದಿದ್ದೇನೆ. ಪೊಲೀಸರು ಹೇಳಿದ ಸಮಯಕ್ಕೆ ಹಾಜರಾಗಿರುವುದಾಗಿ ಅನುಶ್ರೀ ಹೇಳಿದ್ದಾರೆ.