Don't Miss!
- News ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನೀಶ್-ದೀಪಾ ಸನ್ನಿಧಿ ಜೋಡಿಯ 'ಮಾಂಜಾ' ಶುರು
ಮಾಂಜಾ ಕೋಡೊಕೆ ರೆಡಿಯಾದರು ಅನೀಶ್ ಮತ್ತು ದೀಪಾ ಸನ್ನಿಧಿ. ಇವರಿಬ್ಬರಿಗೂ ವಿಶ್ ಮಾಡಿದರು ರಾಕಿಂಗ್ ಸ್ಟಾರ್ ಯಶ್.
'ನಮ್ ಏರಿಯಾದಲ್ ಒಂದಿನಾ' ಹಾಗೂ 'ಪೊಲೀಸ್ ಕ್ವಾರ್ಟಸ್' ಸಿನಿಮಾಗಳನ್ನ ಮಾಡಿ ಸುಮ್ಮನಿದ್ದ ನಟ ಅನೀಶ್ ತೇಜೇಶ್ವರ್, ಇತ್ತೀಚೆಗೆ 'ಅಕಿರ' ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಮೊದಲೆರಡು ಚಿತ್ರಗಳಿಗಿಂತ 'ಅಕಿರ' ತಕ್ಕ ಮಟ್ಟಿಗೆ ಅನೀಶ್ ಗೆ ಯಶಸ್ಸು ತಂದುಕೊಟ್ಟಿತ್ತು.
'ಅಕಿರ'ದಲ್ಲಿ ಇಬ್ಬರು ನಾಯಕಿಯರು ಜೊತೆ ಡ್ಯುಯೆಟ್ ಹಾಡಿದ್ದ ಅನಿಶ್, ಈಗ ಸ್ಯಾಂಡಲ್ ವುಡ್ ನ ಲಕ್ಕಿ ನಾಯಕಿಯೊಂದಿಗೆ 'ಮಾಂಜಾ' ಕೊಡೊಕೆ ಸಿದ್ದವಾಗಿದ್ದಾರೆ.[ಯಶ್ ಬದ್ಲು ಅನೀಶ್ 'ಮಾಂಜಾ' ಕೊಡ್ತಾರಂತೆ.!]
ಹೌದು, ಅನೀಶ್ ಅಭಿನಯಿಸಲಿರುವ ಹೊಸ ಚಿತ್ರ 'ಮಾಂಜಾ' ಇತ್ತೀಚಿಗೆ ಮುಹೂರ್ತ ಮಾಡಿಕೊಂಡಿದೆ. 'ಮಾಂಜಾ' ಚಿತ್ರದಲ್ಲಿ ಅನೀಶ್ ಗೆ ನಾಯಕಿ ದೀಪಾ ಸನ್ನಿಧಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಮೂಹೂರ್ತಕ್ಕೆ ಆಗಮಿಸಿದ್ದ ರಾಕಿಂಗ್ ಸ್ಟಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದರು.
ಈ ಮೊದಲು 'ಮಾಂಜಾ' ಚಿತ್ರವನ್ನ ಯಶ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಯಶ್ ಬದಲು ಈಗ ಅನೀಶ್ 'ಮಾಂಜಾ'ಗೆ ನಾಯಕನಾಗಿದ್ದಾರೆ.'ಮಾಂಜಾ' ಚಿತ್ರವನ್ನ ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಯಶ್ ಅಭಿನಯದ 'ಲಕ್ಕಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಸೂರಿ, ನೀನಾಸಂ ಸತೀಶ್ ಅಭಿನಯಿಸಿದ್ದ 'ಕ್ವಾಟ್ಲೆ ಸತೀಶ್' ಚಿತ್ರಕ್ಕೆ ಬಂಡವಾಳ ಹಾಕಿದ್ದರು.[ಬರೋಬ್ಬರಿ 46 ಕಥೆ ಕೇಳಿ 'ಓಕೆ' ಎಂದ್ರಾ 'ಈ' ನಟ ಮಹಾಶಯ]
ಇನ್ನು ಅಕಿರ' ಚಿತ್ರ ನಿರ್ಮಿಸಿದ್ದ ಚೇತನ್ ಕುಮಾರ್ ಈ ಚಿತ್ರಕ್ಕೂ ಹಣ ಹಾಕುತ್ತಿದ್ದಾರೆ. ಜೊತೆಗೆ ಎಸ್.ಎಸ್. ರೆಡ್ಡಿ ಮತ್ತು ಶ್ರೀಕಾಂತ್ ಪ್ರಸನ್ನ ಸಹ ನಿರ್ಮಾಣದಲ್ಲಿ ಚೇತನ್ ಕುಮಾರ್ ಜೊತೆಗೆ ಕೈ ಜೋಡಿಸುತ್ತಿದ್ದಾರೆ. ಈ ಚಿತ್ರ ಎಸ್2 ಎಂಟರ್ಟೈನ್ ಮೆಂಟ್ ಬ್ಯಾನರ್ನಡಿ ನಿರ್ಮಾಣವಾಗುತ್ತಿದೆ.
ಇದು ಕಮರ್ಷಿಯಲ್ ಮನರಂಜನಾ ಚಿತ್ರವಾಗಿದ್ದು, ಚಿಕ್ಕಣ್ಣ, ಸಾಧುಕೋಕಿಲಾ, ರವಿಶಂಕರ್, ರಂಗಾಯಣ ರಘು ಮತ್ತು ಕಡ್ಡಿಪುಡಿ ಚಂದ್ರು ಸಿನಿಮಾದ ತಾರಾಗಣದಲ್ಲಿದ್ದಾರಂತೆ. ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ರಸೂಲ್ ಎಲ್ಲೂರ್ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಬಹುತೇಕ ಬೆಂಗಳೂರು ಹಾಗು ಮೈಸೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಯಲಿದೆ.